• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ:ಡಿಸಿಎಫ್ ವಸಂತ ರೆಡ್ಡಿ

July 3, 2018 by Gaju Gokarna Leave a Comment

vanamahotsava ಹೊನ್ನಾವರ:’

ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ ಹಿಗೆಯೇ ಮುಂದುವರಿದರೆ ಮುಂದೊಂದು ದಿನ ಉಸಿರಾಟಕ್ಕೆ ಆಮ್ಲಜನಕ ಸಿಗದೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ. ಎಚ್ಚರಿಸಿದರು.
ಎನ್‍ಎಸ್‍ಎಸ್,ರೆಡ್‍ಕ್ರಾಸ್ ಘಟಕ ಹಾಗೂ ಹೊನ್ನಾವರ ಅರಣ್ಯ ವಿಭಾಗ ಇವುಗಳ ಆಶ್ರಯದಲ್ಲಿ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಜಾಗತಿಕವಾಗಿ ಜೈವಿಕ ಮಹತ್ವವುಳ್ಳ ಪಶ್ಚಿಮಘಟ್ಟದ ಸೆರಗಿನಲ್ಲಿರುವ ಅತಿಹೆಚ್ಚು ಮಳೆಯಾಗುವ ಕರಾವಳಿ ಪ್ರದೇಶದಲ್ಲಿ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾಗಿರುವುದು ವಿಪರ್ಯಾಸದ ಸಂಗತಿ.ಜಾಗತಿಕ ತಾಪಮಾನ ಹೀಗೆ ಏರುತ್ತ ಹೋದಲ್ಲಿ ಸಮುದ್ರಮಟ್ಟದಲ್ಲಿ ಏರಿಕೆಯಾಗಿ ಕರಾವಳಿ ನೀರಲ್ಲಿ ಮುಳುಗಬಹುದು.ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ಹೀರಿಕೊಂಡು 1 ಮರ ಪ್ರತಿವರ್ಷ 1 ಟನ್ ಆಮ್ಲಜನಕ ಉತ್ಪಾದಿಸುತ್ತದೆ.ಗಿಡಗಳನ್ನು ಬೆಳೆಸುವ ಮೂಲಕ ತಾಪಮಾನ ಏರಿಕೆಯನ್ನು ನಿಯಂತ್ರಿಸಬಹುದು.’ ಎಂದು ಅವರು ವಿವರಿಸಿದರು.
ಜಿಲ್ಲೆಯಲ್ಲಿ ಪ್ರಾಕೃತಿಕ ಸೌಂದರ್ಯವುಳ್ಳ ಅಪ್ಸರಕೊಂಡದಂಥ ಬೀಚ್‍ಗಳಿವೆ.ಆದರೆ ಈ ಪರಿಸರ ತಾಣಗಳಲ್ಲಿ ಪ್ಲಾಸ್ಟಿಕ್,ಮದ್ಯದ ಬಾಟಲಿಮೊದಲಾದ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚೆಲ್ಲಿರುವುದು ಕಂಡುಬರುತ್ತದೆ.ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯಾಗಬೇಕು’ ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಸ್.ಎಸ್.ಹೆಗಡೆ ಮಾತನಾಡಿ,’ಸಮಾಜ ಕಟ್ಟುವಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನದೇ ಆದ ಕೊಡುಗೆ ಸಲ್ಲಿಸಲು ಸಾಧ್ಯವಿದೆ.ಗಿಡ-ಮರಗಳನ್ನು ಬೆಳೆಸುವುದರಿಂದ ತನಗೇನು ಸಿಗುತ್ತದೆ ಎನ್ನುವ ಸ್ವಾರ್ಥಪರ ಚಿಂತನೆ ಸರಿಯಲ್ಲ.ಪರಿಸರ ಹಾಗೂ ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಗಿಡ-ಮರಗಳನ್ನು ಸಂರಕ್ಷಿಸುವ ಕಾರ್ಯವಾಗಬೇಕು’ ಎಂದು ಹೇಳಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.,ವಲಯ ಅರಣ್ಯಾಧಿಕಾರಿ ಪಿ.ಸಿ.ರವೀಂದ್ರ ಉಪಸ್ಥಿತರಿದ್ದರು.
ರೆಡ್‍ಕ್ರಾಸ್ ಸಂಚಾಲಕ ಪ್ರೊ.ಎಂ.ಜಿ.ಹೆಗಡೆ ಸ್ವಾಗತಿಸಿದರು.ಪ್ರೊ.ಪ್ರಶಾಂತ ಹೆಗಡೆ ನಿರೂಪಿಸಿದರು.ಎನ್‍ಎಸ್‍ಎಸ್ ಅಧಿಕಾರಿ ಪ್ರೊ.ಜಿ.ಎಸ್.ಹೆಗಡೆ ವಂದಿಸಿದರು.ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಕಾಲೇಜಿನ ಇತರ ಸಿಬ್ಬಂದಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

watermarked vanamahotsava 3 watermarked vanamahotsava 2 watermarked vanamahotsava 5 vanamahotsava

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Trending Tagged With: 1 ಮರ ಪ್ರತಿವರ್ಷ 1 ಟನ್ ಆಮ್ಲಜನಕ, vanamahotsava, ಇಂಗಾಲದ ಡೈಆಕ್ಸೈಡ್ ಹೀರಿಕೊಂಡು, ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಉಸಿರಾಟಕ್ಕೆ ಆಮ್ಲಜನಕ, ಎನ್‍ಎಸ್‍ಎಸ್, ಜೈವಿಕ ಮಹತ್ವವುಳ್ಳ ಪಶ್ಚಿಮಘಟ್ಟ, ಡಿಸಿಎಫ್ ವಸಂತ ರೆಡ್ಡಿ, ಪರಿಸರ ರಕ್ಷಣೆ ಎಲ್ಲ ನಾಗರಿಕರ ಹೊಣೆಗಾರಿಕೆ, ಪಶ್ಚಿಮ ಘಟ್ಟದಲ್ಲಿ ಅರಣ್ಯ ನಾಶ, ಪೂರೈಸಬೇಕಾಗಿರುವುದು ವಿಪರ್ಯಾಸ, ಪ್ರಾಕೃತಿಕ ಸೌಂದರ್ಯವುಳ್ಳ ಅಪ್ಸರಕೊಂಡ, ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ನೀರು, ರೆಡ್‍ಕ್ರಾಸ್ ಘಟಕ, ಹೊನ್ನಾವರ ಅರಣ್ಯ ವಿಭಾಗ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...