ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ ಕಾಂಗ್ರೆಸ್ನ ರಾಜ್ಯಾಧ್ಯಕ್ಷರಾಗಿದ್ದರು. ಇಂದು ನಾನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿರುವ ಸಂದರ್ಭದಲ್ಲಿ ದಿನೇಶ್ ಗುಂದೂರಾವ್ರವರು ರಾಜ್ಯಾಧ್ಯಕ್ಷ ಪಟ್ಟಕೇರುತ್ತಿರುವುದು ನಮಗೆಲ್ಲಾ ಅತೀವ ಸಂತಸ ತಂದಿದೆ ಎಂದಿದ್ದಾರೆ.
ಲೋಕಸಭಾ ಚುನಾವಣೆಯ ಸನಿಹದಲ್ಲಿ ಅತ್ಯಂತ ಪ್ರಾಮಾಣಿಕ, ಕ್ರೀಯಾಶೀಲ. ದಕ್ಷ ಯುವ ನಾಯಕನಾದ ಗುಂಡೂರಾವ್ರವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದರಿಂದ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ ಎಂದು ತೆಂಗೇರಿ ಅಭಿಪ್ರಾಯ ಪಟ್ಟಿದ್ದಾರೆ.
Leave a Comment