ಹೊನ್ನಾವರ: ಹೊನ್ನಾವರ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟೂ 38 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡವು.
ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 24 ಪ್ರಕರಣಗಳು, ಹೆಚ್ಚುವರಿ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ 11 ಪ್ರಕರಣಗಳು ಹಾಗೂ ಹಿರಿಯ ಸಿವಿಲ್ ನ್ಯಾಯಲಯದಲ್ಲಿ 3 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಗೊಂಡವು.
ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ, ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಧುಕರ ಪಿ. ಭಾಗ್ವತ ಹಾಗೂ ಹೆಚ್ಚುವರಿ ಜೆ.ಎಮ್.ಎಫ್.ಸಿ. ನ್ಯಾಯಾಧೀಶೆ ಸನ್ಮತಿ ಎಸ್.ಆರ್. ಉಪಸ್ಥಿತರಿದ್ದರು.
Leave a Comment