ಹೊನ್ನಾವರದ ಜನತಾ ವಿದ್ಯಾಲಯ ಕಾಸರಕೋಡದ 8 ನೇ ತರಗತಿಯ ಎಲ್ಲಾ 46 ವಿದ್ಯಾರ್ಥಿಗಳ ಸಮವಸ್ತ್ರ ಪ್ರಾಯೋಜಕತ್ವವಹಿಸಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು.
ಪ್ರಸಿದ್ಧ ವೈದ್ಯರಾದ ಡಾ.ಆಶಿಕಕುಮಾರ ಹೆಗಡೆ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿ ಸಹಾಯ ಮಾಡುವ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು’ ಎಂದರು.
ಸಾಹಿತಿಗಳಾದ ವಿಷ್ಣು ನಾಯ್ಕ, ಅಂಕೋಲಾ ಮಾತನಾಡಿ 9ನೇ ವರ್ಗದ ಎರಡು ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡಿದ ಸಮವಸ್ತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ನಂತರ ಈ ತಿಂಗಳಿನಲ್ಲಿ ನಿವೃತ್ತರಾಗುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಎಸ್.ಎನ್.ಗೌಡರವರನ್ನು ಹಾಗೂ ಮೂರು ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆಗೊಂಡ ನಾಗರಾಜ ನಾಯ್ಕರನ್ನು ಗೌರವಿಸಲಾಯಿತು.
2018 ರ ಎಸ್ಎಸ್ಎಲ್ಸಿಯಲ್ಲಿ ಪ್ರತಿ ವಿಷಯದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಮಾಡಲಾಯಿತು. ಶಾಲಾ ಸಿಬ್ಬಂದಿವರ್ಗ ಇದÀರ ಪ್ರಾಯೋಜಕತ್ವ ವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ಪಿ.ಶಾನಭಾಗರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಶುಭಹಾರೈಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಮುರಳೀಧರ ಗಾಯ್ತೊಂಡೆ, ಹಾಗೂ ರವಿ ಶೇಟ್ ಉಪಸ್ಥಿತರಿದ್ದರು.
ಆರಂಭದಲ್ಲಿ ಶಾಲೆಯ ಮುಖ್ಯಾಧ್ಯಾಪಕಿಯರಾದ ಫಿಲೋಮಿನಾ ರೊಡ್ರಗೀಸ್ನ್ ಸ್ವಾಗತಿಸಿದರು. ಪ್ರೀತಿ ನಾಯ್ಕ ಪ್ರತಿಭಾ ಪುರಸ್ಕಾರದ ಯಾದಿಯನ್ನು ವಾಚಿಸಿದರೆ, ವಿನಾಯಕ ಶೆಟ್ಟಿ ವಂದಿಸಿದರು. ಜಿ.ಎಸ್.ಭಟ್ಟರು ಕಾರ್ಯಕ್ರಮ ನಿರೂಪಿಸಿದರು.
Leave a Comment