• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ

July 21, 2018 by Yogaraj SK Leave a Comment

ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ 14 ಪ್ರಮುಖ ಕಚೇರಿಗಳನ್ನು ಕ್ಷಿಪ್ರ ಗತಿಯಲ್ಲಿ ಆರಂಭಿಸಬೇಕು. ಇದಕ್ಕಾಗಿ ಆರ್ಥಿಕ ಇಲಾಖೆಗೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅವರು ಆದೇಶಿಸಿದ್ದಾರೆ. ಈ ಸಂಬಂಧ ಸಂಬಂಧಿಸಿದ ಎಲ್ಲ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ನಡೆಸಿರುವ ಸಚಿವರು, “ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧವನ್ನು ನಿರ್ಮಿಸದೆ ಹೋದರೆ ಅವುಗಳ ರಚನೆಯ ಹಿಂದಿರುವ ಮೂಲ ಆಶಯವೇ ವಿಫಲವಾಗುತ್ತದೆ. ಹೊಸ ತಾಲ್ಲೂಕುಗಳ ಪೈಕಿ ಇದುವರೆಗೆ ಕೇವಲ 6 ಕಡೆ ಮಾತ್ರ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಗುರುತಿಸಿರುವುದು ನಿರಾಶಾದಾಯಕವಾದ ಬೆಳವಣಿಗೆಯಾಗಿದೆ,’’ ಎಂದು ಹೇಳಿದ್ದಾರೆ. ಇದರ ಜತೆಗೆ, ಅಕ್ರಮ-ಸಕ್ರಮ ಯೋಜನೆಯಡಿ ಅರ್ಹರು ಸಲ್ಲಿಸಿರುವ 94ಸಿ ಮತ್ತು 94ಸಿಸಿ ಅರ್ಜಿಗಳನ್ನು ಹಾಗೂ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ಕೃಷಿ ಮಾಡಿಕೊಂಡು ಸಾಗುವಳಿ ಚೀಟಿಗಾಗಿ ಸಾರ್ವಜನಿಕರು ಸಲ್ಲಿಸಿರುವ ನಮೂನೆ 50 ಮತ್ತು 53ರ ಅರ್ಜಿಗಳನ್ನು ಕೂಡ ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಬೇಕೆಂದು ಸಚಿವರು ನಿರ್ದೇಶಿಸಿದ್ದಾರೆ. ಮುಖ್ಯವಾಗಿ, 94ಸಿ ಮತ್ತು 94ಸಿಸಿ ಅರ್ಜಿಗಳಡಿಯಲ್ಲಿ ಮಂಜೂರಾತಿ ನೀಡಿಯೂ ಎಲ್ಲೆಲ್ಲಿ ಹಕ್ಕುಪತ್ರ ನೀಡಿಲ್ಲವೋ ಅಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನು 3 ತಿಂಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕು. ಒಂದು ವೇಳೆ, ಇಂತಹ ಅರ್ಜಿಗಳನ್ನು ಪುರಸ್ಕರಿಸಲು ಸಾಧ್ಯವಾಗದಿದ್ದಲ್ಲಿ ಅವುಗಳನ್ನು ನಿಯಮಾನುಸಾರ ತಿರಸ್ಕರಿಸಿ, ಅರ್ಜಿದಾರರಿಗೆ ಸೂಕ್ತ ಕಾರಣವನ್ನು ವಿವರಿಸಬೇಕು. ಎಂದು ಸಚಿವ ದೇಶಪಾಂಡೆ ನಿರ್ದೇಶಿಸಿದ್ದಾರೆ. ಆದರೆ ಸಿಆರ್ ಜೆಡ್ ಪ್ರದೇಶ, ಕುಮ್ಕಿ, ಗೋಮಾಳ, ಸಿ ಅಂಡ್ ಡಿ ಮತ್ತು ಡೀಮ್ಡ್ ಫಾರೆಸ್ಟ್ ಪ್ರದೇಶಗಳಲ್ಲಿ ಅನಧಿಕೃತ ಮನೆಗಳನ್ನು ನಿರ್ಮಿಸಿದ್ದಲ್ಲಿ ಅವುಗಳ ಸಕ್ರಮವನ್ನು ಕೋರಿ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.   ಉಳಿದಂತೆ `ಪೋಡಿಮುಕ್ತ ಗ್ರಾಮ’ ಅಭಿಯಾನದಡಿ ಈಗಾಗಲೇ ರಾಜ್ಯದ 9 ಸಾವಿರ ಹಳ್ಳಿಗಳನ್ನು `ಪೋಡಿಮುಕ್ತ ಗ್ರಾಮಗಳು’ ಎಂದು ಘೋಷಿಸಲಾಗಿದೆ. ಆದರೆ, ಈ ಅಭಿಯಾನದಡಿ ರಾಜ್ಯದ ಇನ್ನೂ 21 ಸಾವಿರ ಹಳ್ಳಿಗಳನ್ನು `ಪೋಡಿಮುಕ್ತ ಗ್ರಾಮ’ಗಳನ್ನಾಡಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಜೊತೆಗೆ, ನಿಯಮಿತವಾಗಿ ಕಂದಾಯ ಅದಾಲತುಗಳನ್ನು ನಡೆಸಬೇಕು ಎಂದು ಸಚಿವರು ತಿಳಿಸಿದ್ದಾರೆ. ಕಂದಾಯ ಇಲಾಖೆಯ ದಾಖಲೆಗಳ ವರ್ಗಾವಣೆ, ಭೂಮಿ, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ಕಾವೇರಿ ಇತ್ಯಾದಿ ತಂತ್ರಾಂಶಗಳಲ್ಲಿ ಗ್ರಾಮಗಳನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯನ್ನು ಆಗಸ್ಟ್ 14ರೊಳಗೆ ಮುಗಿಸಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಆದೇಶಿಸಿದ್ದಾರೆ. ಅಲ್ಲದೆ, ಪರಿಶಿಷ್ಟ ಜಾತಿ/ಪಂಗಡ ಮತ್ತು ಇತರೆ ಜನಾಂಗದವರಿಗೆ ರಾಜ್ಯದ ಯಾವುದೇ ಭಾಗದಲ್ಲೂ ಸ್ಮಶಾನ ಭೂಮಿಗೆ ಸಮಸ್ಯೆ ಎದುರಾಗಬಾರದು. ಸಮಸ್ಯೆ ಇರುವ ಕಡೆಗಳಲ್ಲಿ ಸರಕಾರಿ ಭೂಮಿ ಇದ್ದಲ್ಲಿ ಅದನ್ನು `1964ರ ಕರ್ನಾಟಕ ಭೂ ಕಂದಾಯ ಅಧಿನಿಯಮ’ಕ್ಕೆ ಅನುಸಾರವಾಗಿ ಕಾಯ್ದಿರಸಬೇಕು. ಸರಕಾರಿ ಜಮೀನು ಇಲ್ಲದ ಕಡೆಗಳಲ್ಲಿ ಅಗತ್ಯ ಭೂಮಿಯನ್ನು ಖರೀದಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಸಚಿವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Trending Tagged With: 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕು, 6 ಕಡೆ ಮಾತ್ರ ಮಿನಿ ವಿಧಾನಸೌಧ, 94ಸಿಸಿ ಅರ್ಜಿಗಳಡಿಯಲ್ಲಿ ಮಂಜೂರಾತಿ, ಅಗತ್ಯ ಕ್ರಮ, ಕಟ್ಟುನಿಟ್ಟಿನ ಸೂಚನೆ, ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ, ಕುಮ್ಕಿ, ಗೋಮಾಳ, ಜಿಲ್ಲಾಧಿಕಾರಿಗಳು, ಜುಲೈ 21, ಪ್ರಾದೇಶಿಕ ಆಯುಕ್ತರಿಗೆ, ಬೆಂಗಳೂರು, ಮಿನಿ ವಿಧಾನಸೌಧ ರಚನೆಗೆ, ಸಚಿವ ದೇಶಪಾಂಡೆ, ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ಕೃಷಿ, ಸಾಗುವಳಿ ಚೀಟಿಗಾಗಿ ಸಾರ್ವಜನಿಕರು, ಸಿ ಅಂಡ್ ಡಿ ಮತ್ತು ಡೀಮ್ಡ್ ಫಾರೆಸ್ಟ್ ಪ್ರದೇಶ, ಸಿಆರ್ ಜೆಡ್ ಪ್ರದೇಶ, ಹೊಸ ತಾಲ್ಲೂಕುಗಳ ಪೈಕಿ ಇದುವರೆಗೆ ಕೇವಲ, ಹೊಸ ತಾಲ್ಲೂಕುಗಳಲ್ಲಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar