ಹೊನ್ನಾವರ ,ಅರಣ್ಯ ಇಲಾಖೆ, ಯುವಶಕ್ತಿ ಬಳಗ ಗೇರುಸೊಪ್ಪ ಇವರ ಸಹಯೋಗದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗೆಹಳ್ಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ನಗರಬಸ್ತಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನ್ನಪೂರ್ಣ್ ಶಾಸ್ತ್ರೀ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿ ಇಂದಿನ ದಿನಮಾನದಲ್ಲಿ ಪರಿಸರದ ಬಗ್ಗೆ ಹೆಚ್ಚಿಗೆ ಕಾಳಜಿವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತರಾಗಿ ಎಲ್ಲಡೆ ಹಸಿರು ವನವಿರುವಂತೆ ಇಂತಹ ವನಮಹೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಆ ಮೂಲಕ ಪರಿಸರ ರಕ್ಷಣೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನಂತರ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿದರು.
ಮುಖ್ಯ ಅತಿಥಿಗಳಾದ ಐ.ಏಫ್.ಎಸ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ|| ಅಜ್ಜಯ್ಯ.ಜಿ.ಆರ್ ಇವರು ವನಮಹೋತ್ಸವದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನ ಸುರೇಶ ನಾಯ್ಕ ವಹಿಸಿದ್ದರು.
ಗೇರುಸೊಪ್ಪ ವಲಯ ಅರಣ್ಯಾಧಿಕಾರಿ ಚಂದ್ರಶೇಖರ್.ಎಮ್ ನಗರಬಸ್ತಿಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ ನಾಯ್ಕ, ಶಾಲಾ ಮುಖ್ಯೋಪಾದ್ಯಾಯ ಲಕ್ಷ್ಮಣ್ ಆಚಾರಿ, ಯುವಶಕ್ತಿ ಬಳಗದ ಮಹೇಶ ನಾಯ್ಕ, ಸಂದೀಪ ನಾಯ್ಕ, ಶಿವರಾಜ ನಾಯ್ಕ, ತಿಲಕ ನಾಯ್ಕ ,ಗಣೇಶ ನಾಯ್ಕ,ಕುಮಾರ ನಾಯ್ಕ ಉಪಸ್ಥಿತರಿದ್ದರು.
Leave a Comment