• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

August 5, 2018 by Yogaraj SK Leave a Comment

 

* ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ

* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ

* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು

* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯ

ಹಳಿಯಾಳ: –

ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ)ಯನ್ನು ರಾಜ್ಯದೆಲ್ಲೆಡೆ ಕ್ಷಿಪ್ರ ಗತಿಯಲ್ಲಿ ಜಾರಿಗೆ ತರಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. “ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಈ ಯೋಜನೆಗೆ ಮೊದಲ ಸುತ್ತಿನಲ್ಲಿ ಮೈಸೂರು, ಶಿವಮೊಗ್ಗ ಮತ್ತು ಮಂಗಳೂರು ನಗರಗಳು ಆಯ್ಕೆಯಾಗಿವೆ” ಎಂದು ಅವರು ಹೇಳಿದ್ದಾರೆ.  “1964ರ ಕರ್ನಾಟಕ ಭೂಕಂದಾಯ ಅಧಿನಿಯಮ ಮತ್ತು ನಿಯಮಾವಳಿ 1966ರ ಅನ್ವಯ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಆಸ್ತಿಯನ್ನೂ ಅಳತೆ ಮಾಡಿ, ಅವುಗಳ ನಕ್ಷೆಯನ್ನು ತಯಾರಿಸಲಾಗುತ್ತದೆ. ಈಗಾಗಲೇ ಮೈಸೂರು, ಶಿವಮೊಗ್ಗ ಮತ್ತು ಮಂಗಳೂರುಗಳಲ್ಲಿ ಆಸ್ತಿ ಅಳತೆ ಕಾರ್ಯ ಮುಗಿದಿದೆ,” ಎಂದು ದೇಶಪಾಂಡೆ ವಿವರಿಸಿದ್ದಾರೆ.  “ಇದರ ಪ್ರಕಾರ ಆಸ್ತಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ನಾನಾ ಇಲಾಖೆಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ನಂತರ ಅವುಗಳನ್ನು ಪರಿಶೀಲಿಸಲಾಗುವುದು. ಬಳಿಕ ಹಕ್ಕು ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಿ, ಪಿಆರ್ ಕಾರ್ಡುಗಳನ್ನು (ಪ್ರಾಪರ್ಟಿ ರೆಕಾರ್ಡ್ ಕಾರ್ಡ್) ಸಿದ್ಧಪಡಿಸಿ, ಆಸ್ತಿಗಳ ಮಾಲೀಕರಿಗೆ ಇವುಗಳನ್ನು ವಿತರಿಸಲಾಗುವುದು. ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆಗೆ ಈ ಪಿಆರ್ ಕಾರ್ಡ್ ಕಡ್ಡಾಯವಾಗಿದೆ,” ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ. “ಇದರಂತೆ ಈಗಾಗಲೇ ಶಿವಮೊಗ್ಗದಲ್ಲಿ ಪಿಆರ್ ಕಾರ್ಡುಗಳನ್ನು ವಿತರಿಸಲಾಗಿದೆ. ಈಗ ಮಂಗಳೂರು ನಗರ ವ್ಯಾಪ್ತಿಯಲ್ಲೂ ಇದನ್ನು ಕಡ್ಡಾಯ ಮಾಡಿ, ಆದೇಶ ಹೊರಡಿಸಲಾಗಿದೆ. ಕೆಲವೇ ದಿನಗಳಲ್ಲಿ ಮೈಸೂರು ನಗರದಲ್ಲಿ ಕೂಡ ಆಸ್ತಿ ನೋಂದಣಿಗೆ ಇದೇ ಕ್ರಮ ಜಾರಿಗೆ ಬರಲಿದೆ. ಹೀಗೆ ಕ್ಷಿಪ್ರ ಗತಿಯಲ್ಲಿ ರಾಜ್ಯದ ಎಲ್ಲ ನಗರಗಳಲ್ಲೂ ಯುಪಿಓಆರ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು,” ಎಂದು ಅವರು ಹೇಳಿದ್ದಾರೆ.  “ಈ ಪಿಆರ್ ಕಾರ್ಡುಗಳನ್ನು ಕರ್ನಾಟಕ ಭೂ ಕಂದಾಯ ನಿಯಮಾವಳಿ-1966ರ ಫಾರಂ-13ರ ಪ್ರಕಾರ ಮಾಲೀಕತ್ವದ ದಾಖಲೆಗಳೆಂದು ಪರಿಗಣಿಸಲಾಗುವುದು. ಹೀಗಾಗಿ, ನಗರ ಪ್ರದೇಶಗಳಲ್ಲಿ ಆಸ್ತಿ ಹೊಂದಿರುವವರಿಗೆ ಇದು ಅತ್ಯವಶ್ಯಕ ದಾಖಲೆಯಾಗಲಿದೆ,” ಎಂದು ಅವರು ಹೇಳಿದ್ದಾರೆ. ಯೋಜನೆಯ ಅನುಕೂಲಗಳು ಯುಪಿಓಆರ್ ಯೋಜನೆಯಿಂದ ಮುಖ್ಯವಾಗಿ ಸರಕಾರಿ ಆಸ್ತಿಗಳನ್ನು ಗುರುತಿಸಿ, ಸಂರಕ್ಷಿಸಲು ಅನುಕೂಲವಾಗುವುದು. ಜತೆಗೆ, ಮಹಾನಗರ ಪಾಲಿಕೆಗಳು ಮತ್ತು ನಗರಪಾಲಿಕೆಗಳಿಗೆ ತೆರಿಗೆ ಸಂಗ್ರಹಣೆಯ ದೃಷ್ಟಿಯಿಂದ ಆಸ್ತಿಪಾಸ್ತಿಗಳ ನಿಖರ ಮಾಹಿತಿ (ಡೇಟಾಬೇಸ್) ದೊರೆಯಲಿದೆ ಎಂದು ಕಂದಾಯ ಸಚಿವರು ಯೋಜನೆಯ ಪ್ರಯೋಜನವನ್ನು ವಿವರಿಸಿದ್ದಾರೆ.  ಅಲ್ಲದೆ, ನಗರ ಪ್ರದೇಶಗಳಲ್ಲಿರುವ ಆಸ್ತಿಪಾಸ್ತಿಗಳ ಸ್ವರೂಪ, ಅವುಗಳು ಭೌಗೋಳಿಕವಾಗಿ ಎಲ್ಲಿವೆ ಮತ್ತು ಪ್ರತಿಯೊಂದೂ ಆಸ್ತಿಯ ನಿಖರವಾದ ವಿಸ್ತೀರ್ಣವೆಷ್ಟು ಎನ್ನುವುದು ಸಹ ತಿಳಿಯುತ್ತದೆ. ಜತೆಗೆ ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದ ಅನಗತ್ಯ ವ್ಯಾಜ್ಯಗಳು ಕೂಡ ಇಳಿಮುಖಗೊಳ್ಳುತ್ತವೆ ಎಂದು ಆರ್ ವಿ ದೇಶಪಾಂಡೆ ಹೇಳಿದ್ದಾರೆ.  ಬೆಂಗಳೂರಿನಲ್ಲೂ ಜಾರಿ ಯುಪಿಓಆರ್ ಯೋಜನೆಯನ್ನು ಬೆಂಗಳೂರು ನಗರದ 198 ವಾರ್ಡುಗಳ ಪೈಕಿ ಆಯ್ದ 50 ವಾರ್ಡುಗಳಲ್ಲಿ ಜಾರಿಗೊಳಿಸಲು ಸರಕಾರ ಈಗಾಗಲೇ ಅನುಮೋದನೆ ನೀಡಿದೆ. ಇದರ ಅಂಗವಾಗಿ ಮೊದಲಿಗೆ ನಗರದ ಯಾವುದಾದರೂ ಒಂದು ವಾರ್ಡಿನಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Trending Tagged With: ಅತ್ಯವಶ್ಯಕ ದಾಖಲೆ, ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್, ಅವುಗಳು ಭೌಗೋಳಿಕ, ಆಸ್ತಿ ಅಳತೆ ಕಾರ್ಯ, ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆ, ಆಸ್ತಿಪಾಸ್ತಿಗಳ ಸ್ವರೂಪ, ಕಂದಾಯ ಇಲಾಖೆಯ ವ್ಯಾಪ್ತಿ, ಕ್ಷಿಪ್ರ ಗತಿಯಲ್ಲಿ ರಾಜ್ಯ, ನಗರ ಆಸ್ತಿ ಮಾಲೀಕತ್ವ, ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ, ಪಿಆರ್ ಕಾರ್ಡ್ ಕಡ್ಡಾಯ, ಪ್ರಾಪರ್ಟಿ ರೆಕಾರ್ಡ್ ಕಾರ್ಡ್, ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು, ಭೂದಾಖಲೆ, ಭೂಮಾಪನ, ಮಂಗಳೂರು, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ, ಮೈಸೂರಿನಲ್ಲಿ ಜಾರಿ, ಮೊದಲ ಹಂತದಲ್ಲಿ ಶಿವಮೊಗ್ಗ, ಯುಪಿಓಆರ್, ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ, ರಾಜ್ಯದೆಲ್ಲೆಡೆ ಕ್ಷಿಪ್ರ ಗತಿ, ಸಚಿವ ದೇಶಪಾಂಡೆ, ಹಕ್ಕು ದಾಖಲೆಗಳ, ಹಕ್ಕು ದಾಖಲೆಗಳ ಯೋಜನೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar