ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮ ಪಂಚಾಂiಯತಿ ವ್ಯಾಪ್ತಿಯ 46 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಗೆರುಸೊಪ್ಪಾದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು.
ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರಮೋದಿಯವರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಆರಂಭಿಸಿದ್ದಾರೆ. ಈ ಯೋಜನೆ ಕಳೆದ 2 ವರ್ಷದಿಂದ ಜಾರಿಯಲ್ಲಿದ್ದು ಈಗಾಗಲೇ ದೇಶಾದ್ಯಂತ ಸಾಕಷ್ಟು ತಾಯಂದಿರು ಇದರ ಪ್ರಯೋಜನ ಪಡೆದಿದ್ದಾರೆ, ಕಟ್ಟಿಗೆಯ ಬಳಸಿ ಅಡುಗೆ ಮಡುವ ಸಮಯದಲ್ಲಿ ಹೊಗೆಯಿಂದ ಕಣ್ಣು ಮತ್ತು ಶ್ವಾಸಕೋಶಗಳಿಗೆ ಸಮಸ್ಯೆಯಾಗುತ್ತದೆ, ಸಾಕಷ್ಟು ಮಹಿಳೆಯರ ಸಂಕಷ್ಠ ಅರಿತು ಈ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದ್ದಾರೆ.ಕೇವಲ ಒಂದು ಸಂದೇಶ ಕಳಿಸಿದರೆ ಗ್ಯಾಸ ನಿಮ್ಮ ಮನೆಗೆ ಮುಂದಿನ ದಿನದಲ್ಲಿ ಬರುವ ವ್ಯವಸ್ಥೆ ಜಾರಿಯಲ್ಲಿದೆ. ಕ್ಷೇತ್ರದ ಅನಿಲ ರಹಿತ ಮನೆಗಳಿಗೂ ಗ್ಯಾಸ್ ಸಂಪರ್ಕ ಮುಂದಿನ ದಿನದಲ್ಲಿ ನೀಡಲಾಗುವುದು ಎಂದು ಅನುಸರಿಸಬೇಕಾದ ಸುರಕ್ಷತಾ ಕ್ರಮದ ಕುರಿತು ವಿವರಿಸಿದರು.
ನಗರಬಸ್ತಿಕೇರಿ ಗ್ರಾಮ ಪಂಚಾಯತ ಅಧ್ಯಕ್ಷೇ ಅನ್ನಪೂರ್ಣಾ ಶಾಸ್ತ್ರಿ ಮಾತನಾಡಿ ಮಹಿಳೆಯರ ಸ್ವಾಶ್ತ್ಯ ಕಾಪಾಡುವಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಒಂದು ಉತ್ತಮ ಯೋಜನೆ ಜಾರಿಗೆ ತಂದಿದೆ. ಉಚಿತವಾಗಿ ಗ್ಯಾಸ್ ಸಂಪರ್ಕ ಸಿಗುವುದರಿಂದ ಕಟ್ಟಿಗೆ ಅವಲಂಭನೆ ಇರುವುದಿಲ್ಲ ಕಾಡು ನಾಶವಾಗುವುದು ತಪ್ಪುತ್ತದೆ. ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದು ಸದುಪಯೋಗ ಪಡೆದುಕೊಂಡು ಇತರರಿಗು ಯೋಜನೆಯ ಕುರಿತು ಮಾಹಿತಿ ನೀಡಿ ಅವರು ಈ ಯೋಜನೆಯ ಫಲಾನುಭವಿಗಳಾಗುವಲ್ಲಿ ಸಹಕರಿಸಿ ಎಂದರು.
ನಂತರ ಅರ್ಹ ಪಲಾನುಭವಿಗಳಿಗೆ ಉಚಿತ ಗ್ಯಾಸ್ ಹಾಗೂ ಪರಿಕರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ದಿ ಅಧಿಕಾರಿ ವಿರೇಶ್, ಬಿಜೆಪಿ ತಾಲೂಕ ಅಧ್ಯಕ್ಷ ಸುಬ್ರಾಯ ನಾಯ್ಕ, ಮಂಜುನಾಥ ನಾಯ್ಕ, ಗಣಪತಿ ನಾಯ್ಕ ಬಿ.ಟಿ, ಕೇಶವ ನಾಯ್ಕ, ಹನುಮಂತ ಶೆಟ್,ಈಶ್ವರ ನಾಯ್ಕ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Leave a Comment