ಹಳಿಯಾಳ:- ಕೇರಳದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮಾನವೀಯ ನೆಲೆ ಆಧಾರದ ಮೇಲೆ ಕರ್ನಾಟಕ ಸರ್ಕಾರ ಕೇರಳ ರಾಜ್ಯಕ್ಕೆ 10 ಕೋಟಿ ರೂ. ನೆರವು ನೀಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ತಾವು ಚರ್ಚಿಸಿ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ, ಎನ್ಡಿಆರ್ಎಫ್ನಿಂದ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
ತೀವೃ ಮಳೆಯಿಂದ ಅಲ್ಲಿನ ಜನರು ತೊಂದರೆಗೀಡಾಗಿದ್ದು ಸೊಂಕು ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ 15ಕ್ಕೂ ಹೆಚ್ಚು ಸದಸ್ಯರ ವೈದ್ಯಕೀಯ ತಂಡವನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿರುವ ಸಚಿವ ದೇಶಪಾಂಡೆ ಅವರು ಮಳೆ ಕಡಿಮೆಯಾಗುವವರೆಗೆ ಈ ತಂಡ ಕೇರಳದಲ್ಲಿದ್ದು ಅಲ್ಲಿನ ಜನರಿಗೆ ವೈದ್ಯಕೀಯ ಸೇವೆ ಸೇರಿದಂತೆ ವಿವಿಧ ನೆರವು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.
Leave a Comment