ಹಳಿಯಾಳ:- ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಮೈಸೂರಿನ ಆರ್ಕಿಯಾಲಜಿ, ಮ್ಯೂಸಿಯಂ ಮತ್ತು ಹೆರಿಟೇಜ ಇಲಾಖೆಯ ಆಯುಕ್ತರಾದ ವೆಂಕಟೇಶ ಟಿ ಅವರನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಯಾಗಿರುವ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು ಹಳಿಯಾಳ-ದಾಂಡೇಲಿಯ ಈ ಎರಡು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ವೀಕ್ಷಕರಾದ ವೆಂಕಟೇಶ ಅವರಿಗೆ ದೂರು ನೀಡಬಹುದಾಗಿದ್ದು ಅವರ ದೂರವಾಣಿ ಸಂಖ್ಯೆ 9980821911ಗೆ ಸಂಪರ್ಕಿಸುವಂತೆ ಹೇಳಿದ್ದಾರೆ.
ಇನ್ನೂ ಸೋಮವಾರ ದಿ.20ರಂದು ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಅಭ್ಯರ್ಥಿಗಳು ಸಲ್ಲಿಸುವ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು. ದಿ.23 ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ ಎಂದು ತಿಳಿಸಿದ್ದಾರೆ.
Leave a Comment