ಹಳಿಯಾಳ:- ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 19ದಿನ ಪೂರೈಸಿದ್ದು ದಿ.25 ಶನಿವಾರದಂದು 20ನೇ ದಿನಕ್ಕೆ ಕಾಲಿಡಲಿದೆ.
2016-17ನೇ ಸಾಲಿನ 305ರೂ. ಬಾಕಿ ನೀಡದೆ ರೈತರಿಗೆ ಕಾರ್ಖಾನೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ರೈತರ ನಿಯೋಗ ಈಗಾಗಲೇ ಸಕ್ಕರೆ ಸಚಿವ ಕೆಜೆ ಜಾರ್ಜ ಹಾಗೂ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿದೆ.
ಪ್ರತಿದಿನ 2-3 ಹಳ್ಳಿಗಳ ರೈತರು ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಲ್ಲೇ ಅಡುಗೆ ಮಾಡಿ ಊಟ ಮಾಡುತ್ತಿರುವ ರೈತರು ಭಜನಾ ಪದಗಳ ಮೂಲಕ ಕಾರ್ಖಾನೆ ಹಾಗೂ ಜನಪ್ರತಿನಿಧಿಗಳ ವಿರುದ್ದ ಕಿಡಿ ಕಾರುತ್ತಿದ್ದಾರೆ.
.
Leave a Comment