ಹೊನ್ನಾವರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನರಾದರು.
ಕೆ.ವಿ.ಭಟ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹೊನ್ನಾವರ ಮಾರ್ಕೇಟಿಂಗ್ ಕೋ. ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಧ್ಯಕ್ಷರು, ನೀಲ್ಕೋಡ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಹೊನ್ನಾವರ ಹವ್ಯಕ ಬ್ಯಾಂಕ್ ಶಾಖೆಯ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿಯೂ ತೊಡಗಿಕೊಂಡಿದ್ದರು. ಕಿಸಾನ್ ಸಂಘದ ಅಧ್ಯಕ್ಷರಾಗಿ, ತಾಲೂಕಾ ಮಟ್ಟದ ಕಾಂಗ್ರೆಸ್ ಪಕ್ಷದ ಯುವ ಮೋರ್ಚಾ ಮಾಜಿ ಅಧ್ಯಕ್ಷರಾಗಿ ಹಾಗೂ ಹೊನ್ನಾವರ ಕನ್ನಡ ರಾಜ್ಯೋತ್ಸವ ಸಂಘದ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಮಗ, ಮಗಳು ಇದ್ದಾರೆ.
Leave a Comment