• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಂಕಿ ವಲಯ ಮಟ್ಟದ ಕ್ರೀಡಾಕೂಟ ಅರ್ಥಪೂರ್ಣ ಉದ್ಘಾಟನೆ

August 28, 2018 by Vishwanath Shetty Leave a Comment

ಹೊನ್ನಾವರ ತಾಲೂಕಾ ಮಂಕಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ಸಾರಥ್ಯದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಇಬ್ವರು ವಿದ್ಯಾರ್ಥಿಗಳು ಕ್ರೀಡಾಕೂಟ ಉದ್ಘಾಟಿಸುವುದರೊಂದಿಗೆ ತುಂಬಾ ಅರ್ಥಪೂರ್ಣವಾಗಿ ನಡೆಯಿತು.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಚ್ರ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಕುಮಾರಿ, ವಂದನಾ ಗೌಡ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದಿರುವ ಕುಮಾರ.ಮಹೇಂದ್ರ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯೂ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಶ್ರೀ ಕಿರಣ ಬಿ ಪ್ರಭು ವಹಿಸಿದ್ದರು. ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಛೇರಿಯ ವಿಷಯ ಪರೀವಿಕ್ಷಕರಾದ ಶ್ರೀ ಟಿ.ಎಚ್.ನಾಯ್ಕ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಲಹೆ-ಸೂಚನೆ ನೀಡಿದರು. ಸರಕಾರಿ ಪ್ರೌಢಶಾಲೆಯ ಉಪಾಧ್ಯಕ್ಷ ಶ್ರೀ ಎಮ್.ಜಿ.ನಾಯ್ಕ, ಶಾರೀರಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಸಾಧನಾ ಬರ್ಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಹುರುದುಂಬಿಸಿದರು. ಮುಖ್ಯಾಧ್ಯಾಪಕರಾದ ಶ್ರೀ ವಿ.ಎಸ್.ಅವಧಾನಿ ಪ್ರಾರಂಭದಲ್ಲಿ ಎಲ್ಲರನ್ನೂ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಶಾಲೆಯ ಶಿಕ್ಷಕರಾದ ಶ್ರೀ ಅಶೋಕ ನಾಯ್ಕ ವಂದಿಸಿದರು. ಶ್ರೀ ರಾಘವೇಂದ್ರ ಹೆಗಡೆ ನಿರೂಪಿಸಿದರು. ಹನ್ನೊಂದು ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿತೈಷಿಗಳು ಸಾಕ್ಷಿಯಾದರು. ಕ್ರೀಡಾಕೂಟದ ನಾಯಕತ್ವವನ್ನು ದೈಹಿಕ ಶಿಕ್ಷಕರಾದ ಶ್ರೀ ಎಲ್.ಎಚ್.ಚಂದಾವರಕರ ಮತ್ತು ಯಶ್ವಂತ ಮೇಸ್ತ ವಹಿಸಿದರು. ಕ್ರೀಡಾಕೂಟದಲ್ಲಿ ದಿನವಿಡಿ ವಿವಿಧ ಆಟೋಟಗಳು ನಡೆಯಿತು.

watermarked DSC 0123 watermarked DSC 0076

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Canara News

Explore More:

About Vishwanath Shetty

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...