ಪ್ರತಿಭೆಗಳು ಅರಳಲು ಸರ್ಕಾರ ಪ್ರತಿಭಾ ಕಾರಂಜಿ ಆಚರಿಸುತ್ತಿದೆ ಆದರೆ ಮಳೆಗಾಲದ ಸಂಧರ್ಬದಲ್ಲಿ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಆಚರಿಸದರೆ ಮಕ್ಕಳು ಸಮಸ್ಯೆ ಅನುಭವಿಸುತ್ತಾರೆ ಅಕ್ಟೂಬರ್ ತಿಂಗಳ ಆರಂಭದಲ್ಲಿ ಆಚರಿಸದರೇ ಒಳಿತು ಎಂದು ಸಾಲ್ಕೋಡ್ ಗ್ರ್ರಾಮ ಪಂಚಾಯತ ಸದಸ್ಯರಾದ ಶ್ರೀಧರ ಹೆಗಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತಿ ಉತ್ತರಕನ್ನಡ,ಸಮೂಹ ಸಂಪನ್ಮೂಲ ಕೇಂದ್ರ ಸಾಲ್ಕೋಡ್ ಇವರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರೆಕೋಣ ಇವರ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿತ್ತು,
ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಮಾತನಾಡಿ ಪ್ರಾಥಮಿಕ ಶಾಲೆಯ ಮಕ್ಕಳ ಪ್ರತಿಭೆ ಗುರುತಿಸಿ ಅವರು ಆ ಪ್ರತಿಭೆಯ ಮೂಲಕ ಇನ್ನಷ್ಟು ಸಾಧನೆ ಮಾಡಲು ಇಂತಹ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದ್ದಾರೆ. ಕಳೆದ 3 ವರ್ಷದಿಂದ ಈ ಕಾರ್ಯಕ್ರಮಕ್ಕೆ ಸಂತೋಷದಿಂದ ಭಾಗವಹಿಸುತ್ತಿದ್ದೇನೆ. ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಆ ಕಲೆಯ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಕಾರ್ಯಕ್ರಮ ಸಾಂಸ್ಕøತಿಕ ವೈಭವವಿದ್ದಂತೆ ಅದನ್ನು ನಾವು ಮುಂದುವರೆಸಿಕೊಂಡು ಹೋಗಲು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿ ಪೊತ್ಸಾಹ ನೀಡಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಶಂಕರ ಹರಿಕಂತ್ರ ಮಾತನಾಡಿ ಶಿಕ್ಷಣ ಇಲಾಖೆಯ ವತಿಯಿಂದ ಪ್ರತಿವರ್ಷ ಪ್ರತಿಭಾ ಕಾರಂಜಿ ಆಚರಿಸಲಾಗುತ್ತಿದೆ. ನಾಡಹಬ್ಬ ಮೈಸುರು ದಸರಾಗಳಿಗೆ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ತಮ್ಮ ಪ್ರದರ್ಶನ ನೀಡಲು ಅವಕಾಶ ಮಾಡಿಕೊಡಲಾಗುತ್ತದೆ. ಮಳೆಗಾಲ ರಾಜ್ಯದ 5 ಜಿಲ್ಲೆಗಳಲ್ಲೀ ವ್ಯಾಪಕವಾಗಿದ್ದು ಉಳಿದಡೆ ಆ ಪ್ರಮಾಣ ಇರುವುದಿಲ್ಲ. ನಮ್ಮ ಜಿಲ್ಲೆಯ ಪ್ರತಿಭಾವಂತರಿಗೂ ಅವಕಾಶ ಸಿಗಬೇಕಿರುದರಿಂದ ಈ ಸಮಯದಲ್ಲಿ ನಡೆಸಬೇಕಾದ ಅನಿವಾರ್ಯತೆ ಇದೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಿ ಸಮಯಬದಲಾಯಿಸಿದರೆ ಆಗಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಾಂತಿ ನಾಯ್ಕ ವಹಿಸಿದ್ದರು,
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಹೇಶ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ ಭಂಡಾರಿ, ಬಿ.ಆರ್.ಸಿ ಸತೀಶ ನಾಯ್ಕ, ಶಿಕ್ಷಕ ಸಂಘದ ಕಾರ್ಯದರ್ಶಿ ಐ.ಆರ್.ಭಟ್, ಸಿ.ಆರ್.ಪಿ. ಸತೀಶ ನಾಯ್ಕ, ಶಾಲಾ ಮುಖ್ಯೊಪಧ್ಯಾಯರಾದ ಆರ್.ಎಸ್.ಭಟ್ ಉಪಸ್ಥಿತರಿದ್ದರು.
Leave a Comment