ಹಳಿಯಾಳ:- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದ ದಾಮೋದರ ಗರಡೀಕರ್ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
“ಗರಡೀಕರ್ ಅವರು ಸಾರ್ವಜನಿಕ ಜೀವನದಲ್ಲಿ ದೀನ-ದಲಿತರ ಪರವಾಗಿ ಅಪಾರ ಕಳಕಳಿಯನ್ನು ಹೊಂದಿದ್ದರು. ಜೊತೆಗೆ, ಅವರೊಬ್ಬ ಉತ್ತಮ ಕ್ರೀಡಾಪೋಷಕರಾಗಿದ್ದರು. ಅವರ ನಿಧನದಿಂದ ಸಾಮಾಜಿಕ ಕಳಕಳಿಯುಳ್ಳ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ,’’ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.
Leave a Comment