• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ

September 5, 2018 by Gaju Gokarna Leave a Comment

watermarked IMG 20180905 115812742

ಹೊನ್ನ್ನಾವರ ,ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಮುಂದಿನ ಸಮಾಜ ಸಧೃಢವಾಗಿ ಬೆಳೆಯಬೇಕೆಂದರೆ ಇಂದಿನ ಶಿಕ್ಷಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಸಕ ದಿನಕರ ಕೆ ಶೆಟ್ಟಿ ನುಡಿದರು. ಅವರು ನಗರದ ಹವ್ಯಕ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯು ಈ ಬಾರಿ ಹೊನ್ನಾವರದಲ್ಲಿ ನಡೆದು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ವಿತರಿಸಲಾಯಿತು. ಕಿರಿಯ ಹಾಗೂ ಹಿರಿಯ ಪ್ರಾಥಮಿಕ ವಿಭಾಗದಿಂದ ಮತ್ತು ಪ್ರೌಢಶಾಲಾ ವಿಭಾಗದಿಂದ ತಲಾ 5 ಜನ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಹಾಗೂ ಹೊನ್ನಾವರ ತಾಲೂಕಿನಲ್ಲಿ ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತರಾದ 30 ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಪಂಚಾಯತದ ಅಧ್ಯಕ್ಷರಾದ ಜಯಶ್ರೀ ಮೊಗೇರ ಮಾತನಾಡಿ ನಮ್ಮ ದೇಶದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ರವರ ಆದರ್ಶಗಳನ್ನು ಸಭೆಗೆ ತಿಳಿಸುತ್ತಾ ಅವರೊಬ್ಬ ತತ್ವಜ್ಞಾನಿ, ದಾರ್ಶನಿಕ, ರಾಷ್ಟ್ರಪತಿ ಇವೆಲ್ಲದಕ್ಕೂ ಮಿಗಿಲಾಗಿ ಅವರೋರ್ವ ಉತ್ತಮ ಶಿಕ್ಷಕರಾಗಿದ್ದರು. ಅವರ ಸ್ಪೂರ್ತಿ ನಮ್ಮೆಲ್ಲಾ ಶಿಕ್ಷಕ ಬಂಧುಗಳಿಗೆ ದಾರಿದೀಪವಾಗಲಿ ಎಂದು ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತದ ಶಿಕ್ಷಣ ಮತ್ತು ಆರೋಗ್ಯ ಸಮೀತಿಯ ಅಧ್ಯಕ್ಷರಾದ ರತ್ನಾಕರ ನಾಯ್ಕ ಹೊನ್ನಾವರ ತಾಲೂಕ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ಜಿಲ್ಲಾ ಪಂಚಾಯತ ಸದಸ್ಯರುಗಳಾದ ಶಿವಾನಂದ ಹೆಗಡೆ, ಪುಷ್ಪಾ ನಾಯ್ಕ, ಡಯಟ ಪ್ರಾಚಾರ್ಯರಾದ ಈಶ್ವರ ನಾಯ್ಕ, ಲಯನ್ಸ್ ಅಧ್ಯಕ್ಷರಾದ ರಾಜೇಶ ಸಾಳೆಹಿತ್ತಲ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಸುಧೀರ ನಾಯಕ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಪ್ರಭಾಕರ ಭಂಟ್, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಆನಂದು ಗಾಂವಕರ ರವರು ಈ ಸಂದರ್ಭದಲ್ಲಿ ಶಿಕ್ಷಕರ ದಿನಾಚರಣೆಯ ಶುಭಾಶಯವನ್ನು ಕೋರಿದರು. ನಿವೃತ್ತ ಶಿಕ್ಷಕರ ಪರವಾಗಿ ಎ.ಯು.ಮೌಲಿಮ್, ಶೈಲಾ ಸಾಳುಂಕೆ, ಫಿಲೋಮಿನಾ ರೊಡ್ರಗೀಸ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್.ಎಸ್.ನಾಯ್ಕ ಪ್ರಾಥಮಿಕ ಅನುದಾನಿತ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿ.ಎಚ್.ನಾಯ್ಕ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷರಾದ ಸಾಧನಾ ಬರ್ಗಿ, ಲಯನ್ಸ್ ಪದಾಧಿಕಾರಿಗಳಾದ ಸುರೇಶ ಎಸ್, ಯೋಗೇಶ ರಾಯ್ಕರ್ ಉಪಸ್ಥಿತರಿದ್ದರು.
ಸಭಾ ಪ್ರಾರಂಭದಲ್ಲಿ ವಿಶ್ವೇಶ್ವರ ಭಟ್ ತಂಡದವರಿಂದ ಗುರುವಂದನಾ ಗೀತೆ, ವೀರೇಶ ಬಡಿಗೇರ ಧಾರವಾಡ ಇವರಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ಧೇಶಕರಾದ ಎನ್.ಜೆ.ನಾಯಕ ಸರ್ವರನ್ನು ಸ್ವಾಗತಿಸಿದರು. ಸುಧೀಶ ನಾಯ್ಕ ಮತ್ತು ಕಲ್ಪನಾ ಹೆಗಡೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಕೊನೆಯಲ್ಲಿ ವಂದಿಸಿದರು.
ಈ ಕಾರ್ಯಕ್ರಮದ ಸಂಘಟನೆಯಲ್ಲಿ ತಾಲೂಕಾ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ ನಾಯ್ಕ ಪದಾಧಿಕಾರಿಗಳಾದ ಆರ್.ಟಿ.ನಾಯ್ಕ, ಮನೋಹರ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಎಮ್.ಜಿ.ನಾಯ್ಕ, ಉದಯ ನಾಯ್ಕ, ಮಾಧ್ಯಮಿಕ ಪ್ರೌಢಶಾಲಾ ಅಧ್ಯಕ್ಷರಾದ ಸಂತೋಷಕುಮಾರ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಫ್ರೌಢವಿಭಾಗದ ಅಧ್ಯಕ್ಚರಾದ ಮಹೇಶ ಶೆಟ್ಟಿ ಪಾಲ್ಗೊಂಡಿದ್ದರು.

Teachers Day

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅತ್ಯಂತ ಪವಿತ್ರವಾದದ್ದು, ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ತ್ವಜ್ಞಾನಿ, ದಾರ್ಶನಿಕ, ಶಾಸಕ ದಿನಕರ ಕೆ ಶೆಟ್ಟಿ, ಸಮಾಜ ಸಧೃಢ, ಹವ್ಯಕ ಸಭಾಭವನ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...