• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಋಣ ತಿರಿಸಲು 5 ವರ್ಷದ ಅವಧಿ ಸಾಲದು ಆದರು ಸಹ ನಿಮ್ಮ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ

September 17, 2018 by Gaju Gokarna Leave a Comment

watermarked 17 hnr 12

ಹೊನ್ನಾವರ: ತಾಲೂಕಿನ ಮೂಡ್ಕಣಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶ್ರೀ ಶಂಭುಲಿಂಗೆಶ್ವರ ಸಾಂಸ್ಕ್ರತಿಕ ಹಾಗೂ ಕ್ರಿಡಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ನಡೆಯಿತು.
2018ರ ಎಸ್‍ಎಸ್‍ಎಲ್‍ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕಾವ್ಯ ರಾಮಚಂದ್ರ ನಾಯ್ಕ, ದ್ವೀತಿಯ ಪಿ.ಯು.ಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪ್ರಮೋದ ರಾಜು ನಾಯ್ಕ ಮೂಡ್ಕಣಿಯ ಇರ್ವರು ಪ್ರತಿಭಾನ್ವಿತರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಪುರಸ್ಕರಿಸಲಾಯಿತು. ಗ್ರಾಮದ ಉತ್ತಮ ಕೃಷಿಕರಾಗಿ ಗುರುತಿಸಿಕೊಂಡ ಗಂಗಾಧರ ನಾಯ್ಕ ಎಂಬುವವರಿಗೆ ಉತ್ತಮ ಕೃಷಿಕ ಪ್ರಶಸ್ತಿ ಹಾಗೂ ಲಕ್ಷ್ಮೀ ಹಳ್ಳೇರ್‍ರವರಿಗೆ ಉತ್ತಮ ಕೃಷಿಕ ಮಹಿಳೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಉರ ನಾಗರಿಕರ ವತಿಯಿಂದ ಭಟ್ಕಳ ಕ್ಷೇತ್ರದ ಶಾಸಕ ಸುನಿಲ್ ನಾಯ್ಕರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವಿಕರಿಸಿ ಶಾಸಕ ಸುನಿಲ್ ಮಾತನಾಡಿ ನಿಸ್ವಾರ್ಥದಿಂದ ಅತಿ ಹೆಚ್ಚು ಮತನೀಡಿ ಗೆಲುವಿಗೆ ಶ್ರಮಿಸಿದ್ದಿರಿ ನಿಮಗೆ ನಾನು ಚಿರಋಣಿ ಎಂದರು. ನಿಮ್ಮ ಋಣ ತಿರಿಸಲು 5 ವರ್ಷದ ಅವಧಿ ಸಾಲದು ಆದರು ಸಹ ನಿಮ್ಮ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದರು. ಯಾವುದೇ ರೀತಿಯಲ್ಲು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳದೇ ಎಲ್ಲರನ್ನು ಪರಿಗಣನೆಗೆ ತೆಗೆದುಕೊಂಡು ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ ನಿಮ್ಮ ಆಜ್ಞೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರಾದ ಪಿ.ಟಿ ನಾಯ್ಕ ಮಾತನಾಡಿ ಶಾಸಕರು ಮುಂದಿನ ದಿನಗಳಲ್ಲಿ ನಮ್ಮ ಗ್ರಾಮದ ಅಭಿವೃದ್ದಿಯಲ್ಲಿ ಹೆಚ್ಚಿನ ಗಮನ ಹರಿಸಲಿ ಎಂದರು. ನಮ್ಮ ಸಮುದಾಯದವರು ಎಂದು ಕೇವಲ ನಮ್ಮ ಕೆಲಸ ಮಾತ್ರ ಮಾಡಬೇಕು ಎಂದು ನಾವು ಶಾಸಕರಿಗೆ ಅತಿಯಾದ ಒತ್ತಡ ತರುವ ಕೆಲಸ ಮಾಡಬಾರದು. ಇತರರಿಗು ಅವರ ಸಹಾಯ ಹಸ್ತ ದೊರಕುವಂತೆ ನಾವು ಸಹಕರಿಸಬೇಕು ಎಂದು ವಿನಂತಿಸಿದರು.
ವೇದಿಕೆಯಲ್ಲಿ ಶಂಭುಲಿಂಗೇಶ್ವರ ದೇವಾಲಯದ ಅಧ್ಯಕ್ಷ ಟಿ.ಟಿ ನಾಯ್ಕ, ಬಿಜೆಪಿ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ನಾಯ್ಕ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಂಭು ಹೆಗಡೆ, ಚಂದ್ರಹಾಸ್ ನಾಯ್ಕ, ಜಯಂತ ನಾಯ್ಕ, ನಿತಿನ್ ನಾಯ್ಕ,ವಿಘ್ನೇಶ್ವರ ಹೆಗಡೆ, ಶ್ರೀಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

watermarked 17 hnr 13 watermarked 17 hnr 11

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಉತ್ತಮ ಕೃಷಿಕ ಪ್ರಶಸ್ತಿ, ಋಣ ತಿರಿಸಲು 5 ವರ್ಷದ ಅವಧಿ ಸಾಲದು, ಎಸ್‍ಎಸ್‍ಎಲ್‍ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಕಾವ್ಯ ರಾಮಚಂದ್ರ ನಾಯ್ಕ, ಕ್ರಿಡಾ ಸಂಘ, ಗ್ರಾಮದ ಉತ್ತಮ ಕೃಷಿಕರಾಗಿ ಗುರುತಿಸಿಕೊಂಡ ಗಂಗಾಧರ ನಾಯ್ಕ, ದ್ವೀತಿಯ ಪಿ.ಯು.ಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪ್ರಮೋದ ರಾಜು ನಾಯ್ಕ, ಪ್ರತಿಭಾನ್ವಿತರಿಗೆ, ಮೂಡ್ಕಣಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಮೂಡ್ಕಣಿಯ, ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ, ರ್ವರು, ಲಕ್ಷ್ಮೀ ಹಳ್ಳೇರ್‍ರವರಿಗೆ ಉತ್ತಮ ಕೃಷಿಕ ಮಹಿಳೆ ಪ್ರಶಸ್ತಿ, ಶಂಭುಲಿಂಗೆಶ್ವರ ಸಾಂಸ್ಕ್ರತಿಕ, ಶಾಸಕ ಸುನಿಲ್ ನಾಯ್ಕ, ಸಹ ನಿಮ್ಮ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...