ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ ಮಾತನಾಡಿ ಪ್ರತಿ ವರ್ಷವೂ ಅತ್ಯಂತ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವವನ್ನು ಆಚರಿಸುತ್ತಾ ಬರುತ್ತಿರುವುದು ಹಾಗೂ ಸಾಧಕರನ್ನು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಒಳ್ಳೆ ಸಂಗತಿ ಮುಂದಿನ ದಿನಗಳಲ್ಲಿ ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ ಎಂದು ಹೇಳಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ À ಪಿ.ಎಲ್.ಡಿ.ಬ್ಯಾಂಕ ನಿರ್ದೆಶಕರಾದ ಪಿ.ಟಿ.ನಾಯ್ಕ ಮಾತನಾಡಿ ಇಲ್ಲಿನ ಯುವಕರು ಹಾಗೂ ಹಿರಿಯರು ಸೇರಿ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ನಡೆಸುತ್ತಾ ಬಂದಿರುವುದು ಮಾದರಿಯಾಗಿದೆ ಎಂದು ಹೇಳಿದರು ವೇದಿಕೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಾವ್ಯ ರಾಮಚಂದ್ರ ನಾಯ್ಕ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರಮೋದ ರಾಜು ನಾಯ್ಕ ಇವರನ್ನು ಪುರಸ್ಕರಿಸಲಾಯಿತು.
ಉತ್ತಮ ಕೃಷಿಕರಾಗಿ ಗಂಗಾಧರ ದೇವಪ್ಪ ನಾಯ್ಕ ಹಾಗೂ ಉತ್ತಮ ಕೃಷಿ ಮಹಿಳೆಯಾಗಿ ಲಕ್ಷ್ಮೀ ಕೃಷ್ಣ ಹಳ್ಳೆರ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯುವಕ , ಯುವತಿಯರಿಗೆ ನಡೆದ ಸಾಂಸ್ಕøತಿಕ ಹಾಗೂ ಕ್ರೀಡೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಟಿ.ಟಿ.ನಾಯ್ಕ, ಪಿ.ಎಮ್ ನಾಯ್ಕ, ಶಂಭು ಹೆಗಡೆ, ಜಯಂತ ನಾಯ್ಕ, ವಿಘ್ನೇಶ್ವರ ಹೆಗಡೆ, ಮಂಜುನಾಥ ನಾಯ್ಕ, ಯೋಗಿನಿ ಗೋಪಾಲ ನಾಯ್ಕ, ನಿತೀನ್ ನಾಯ್ಕ ಉಪಸ್ಥಿತರಿದ್ದರು.
ಸಮಿತಿಯ ಅಧ್ಯಕ್ಷರಾದ ಉದಯ ಎಮ್ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು, ವಿನಾಯಕ ನಾಯ್ಕ ಸ್ವಾಗತಿಸಿದರು, ಭವ್ಯಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು, ವೇದಿಕೆಯಲ್ಲಿ ಶಾಸಕರನ್ನು ಸಮಿತಿಯ ಪರವಾಗಿ ಸನ್ಮಾನಿಸಲಾಯಿತು.
Leave a Comment