ಹಳಿಯಾಳ:- ಸೆಪ್ಟಂಬರ್ ದಿ.25 ಮಂಗಳವಾರದಂದು ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಡಿಎಫ್ಎ ಕ್ರೀಡಾಂಗಣದಲ್ಲಿ ಶಿರಸಿ ಶೈಕ್ಷಣ ಕ ಜಿಲ್ಲಾ ಮಟ್ಟದ 2018-19 ನೇ ಸಾಲಿನ 14 ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರಅಮ್ಮದ ಮುಲ್ಲಾ ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಜಿಪಂ, ಸಾರ್ವಜನೀಕ ಶಿಕ್ಷಣ ಇಲಾಖೆ, ಶಿರಸಿ ಶೈಕ್ಷಣ ಕ ಜಿಲ್ಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಳಿಯಾಳ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ದೂರದ ಬ್ಲಾಕ್ನಿಂದ ಬರುವವರಿಗೆ ದಾಂಡೇಲಿಯಲ್ಲಿ ವಸತಿ, ಊಟ-ಉಪಹಾರದ ವ್ಯವಸ್ಥೆ ಮಾಡಲಾಗಿದೆ. 16ಕ್ರೀಡೆಗಳಲ್ಲಿ 1200 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ವೈಯಕ್ತಿಕ ಕ್ರೀಡೆಯಲ್ಲಿ ಗೆದ್ದವರು ರಾಜ್ಯ ಮಟ್ಟದಲ್ಲಿ ಸ್ಪರ್ದಿಸಲಿದ್ದು, ಗುಂಪು ಕ್ರೀಡೆಯಲ್ಲಿ ಆಯ್ಕೆಯಾದ ಗುಂಪು ವಿಭಾಗ ಮಟ್ಟಕ್ಕೆ ಹೋಗಿ ಅಲ್ಲಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲಿದೆ ಎಂದು ಬಿಇಓ ಸಮೀರ್ ಮಾಹಿತಿ ನೀಡಿದರು.
ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಸಭಾಪತಿಗಳಾದ ಬಸವರಾಜ ಹೋರಟ್ಟಿ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರ್ಯಕ್ರಮದ ಊದ್ಘಾಟನೆಯಲ್ಲಿ ಭಾಗವಹಿಸಿದ್ದಾರೆಂದರು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯಕ, ದೈಹಿಕ ಶಿಕ್ಷಕ ಸಲೀಂ ಜಮಾದಾರ, ವೆಂಕಟೇಶ ನಾಯ್ಕ, ಮಠಪತಿ ಇತರರು ಇದ್ದರು.
Leave a Comment