ಹೊನ್ನಾವರ. ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ವಲಯಮಟ್ಟದ ಅಂತರ್ ಕಾಲೇಜುಗಳ 2018-19ರ ಯುವಜನೋತ್ಸವದಲ್ಲಿ ಎಸ್.ಡಿ.ಎಂ. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತೀ ಹೆಚ್ಚು ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ ಸತತ ಎರಡನೇ ಬಾರಿಗೆ ‘ಸಮಗ್ರ ವೀರಾಗ್ರಣಿ’ ಪ್ರಶಸ್ತಿಗೆ ಭಾಜನರಾದರು. ಶಿರಸಿಯ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯವು ‘ರನ್ನರ್ಸ್ಅಫ್’ ಪ್ರಶಸ್ತಿ ಪಡೆದುಕೊಂಡಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಹಿರಿಯ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ ಹಾಗೂ ನಿವೃತ್ತ ಸೈನಿಕರಾದ ರಾಜೇಶ ನಾಯ್ಕ ವಂದೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಪ್ರಾಚಾರ್ಯರಾದ ಡಾ.ವಿಜಯಲಕ್ಮೀ ಎಂ ನಾಯ್ಕ ಹಾಗೂ ಯುವಜನೋತ್ಸವದ ಸಂಯೋಜಕರಾದ ಡಾ ಎಂ.ಆರ್.ನಾಯಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
Leave a Comment