ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ರ್ಕತಿಕ ಕಾರ್ಯಕ್ರಮದ ಕಡೆ ಗಮನ ನೀಡಬೇಕು ಆ ಮೂಲಕ ಕ್ರೀಡಾಪಟುಗಳಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು ಎಂದು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೆತ್ರದ ಶಾಸಕ ಸುನಿಲ್ ನಾಯ್ಕ ಅಭಿಪ್ರಾಯಪಟ್ಟರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾಮಟ್ಟದ 14 ವರ್ಷ ವಯೋಮಿತಿಯ ಒಳಗಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾ ಕೂಟವನ್ನು ಸೆಂಟ್ ಅಂತೋನಿ ಪ್ರೌಡಶಾಲೆಯ ಮೈದಾನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಧ್ವಜಾರೋಹನ ನಡೆಸಿ ಪಾರಿವಾಳವನ್ನು ಹಾರಿ ಬಿಡುವ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಲಾಯಿತು. ಜಿಲ್ಲೆಯ 5 ತಾಲೂಕಗಳ ವಿದ್ಯಾರ್ಥಿಗಳು ಆಕರ್ಷಕವಾದ ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವವಂದನೆ ಸ್ವೀಕರಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು ಸಭೆಯನ್ನು ಉದ್ದೇಶಿಸಿ ಮಾತನಾಡಿಕ್ರೀಡಾ ಇಂದು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಅದನ್ನು ಎಲ್ಲಾ ಕ್ರಿಡಾಪಟುಗಳು ದೈಹಿಕ ಶಿಕ್ಷಕರಿಂದ ಈ ಬಗ್ಗೆ ತರಬೇತಿ ಪಡೆದುಕೊಳ್ಳಬೇಕು. ಕೇವಲ ಸರ್ಟಿಪಿಕೆಟ್ಗೊಸ್ಕರ ಶಿಕ್ಷಣ ಪಡೆಯುವುದಲ್ಲ ಕ್ರಿಡೆಯಲ್ಲಿ ಭಾಗವಹಸಿ ನಾಡಿಗೆ ದೇಶಕ್ಕೆ ಕಿರ್ತಿ ತರುವಂತಾಗಬೇಕು.
ಚಿಟ್ಟಾಣಿಯ ರಾಮಚಂದ್ರ ಹೆಗಡೆಯವರ ಯಕ್ಷಗಾನದ ಶೈಲಿಯ ಕ್ರೀಡಾ ಲಾಂಛನವನ್ನು ಬಿಡುಗಡೆ ಮಾಡಿದ ಜಿಲ್ಲಾ ಪಂಚಾಯತ್ ಅದ್ಯಕ್ಷೆ ಜಯಶ್ರೀ ಮೊಗೆರ್ ಮಾತನಾಡಿ ಕ್ರಿಡಾಪಟುಗಳು ಕ್ರಿಡಾ ಮನೋಭಾವನೆಯಿಂದ ಸ್ಪರ್ದೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಜಿಲ್ಲೆಯಿಂದ ಯಾವುದೇ ಕ್ರಿಡಾಪಟುಗಳು ರಾಜ್ಯಮಟ್ಟ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದಲ್ಲಿ ನಮ್ಮ ಜಿಲ್ಲೆಯವರು ಎಂಬ ಮನೋಭಾವನೆಯಿಂದ ಎಲ್ಲರು ಬೆಂಬಲಿಸಿ ಎಂದರು.
ಕಳೆದ ಬಾರಿ ಜಿಲ್ಲೆಯಿಂದ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ 4 ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಮಾತನಾಡಿ ತಾಲೂಕಿಗೆ ಒಂದು ಉತ್ತಮ ಕ್ರಿಡಾಂಗಣದ ಅವಶ್ಯಕv ಇದ್ದು ಮುಮದಿನ ದಿನದಲ್ಲಿ É ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿವಹಿಸಬೇಕು ಎಂದರು.
ವೇದಿಕೆಯಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ರಾಜಶ್ರೀ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಡತೋಕಾ, ಶ್ರೀಕಲಾ ಶಾಸ್ತ್ರಿ, ಸವಿತಾ ಗೌಡ, ರತ್ನಾಕರ ನಾಯ್ಕ, ಪುಷ್ಪಾ ನಾಯ್ಕ , ತಾಲೂಕ ಸ್ಥಾಯಿ ಸಮಿತಿ ಅಧ್ಯಕ್ಷ ಖಾಜಿ ಮಹ್ಮದ್ ಇರ್ಷಾದ್, ಜಿಲ್ಲಾ ಉಪನಿರ್ದೇಶಕರಾದ ಎನ್.ಜಿ.ನಾಯ್ಕ, ಆನಂದ ಗಾಂವ್ಕÀರ್, ಎನ್.ಎಸ್.ನಾಯ್ಕ, ತಾಲೂಕ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಗೀರೀಶ ಪದಕಿ ಉಪಸ್ಥಿತರಿದ್ದರು.
ಭಾವನ ಟಿವಿಗಾಗಿ ವಿಶ್ವನಾಥ ಸಾಲ್ಕೋಡ್
ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶಾಸಕ ಸುನೀಲ ನಾಯ್ಕ ಚಾಲನೆ
ಹೊನ್ನಾವರದ ಸೆಂಟ್ ಅಂಥೋನಿ ಪ್ರೌಡಶಾಲಾ ಮೈದಾನದಲ್ಲಿ ಚಾಲನೆ
ಚಿಟ್ಟಾಣಿಯ ರಾಮಚಂದ್ರ ಹೆಗಡೆಯವರ ಯಕ್ಷಗಾನದ ಶೈಲಿಯ ಕ್ರೀಡಾ ಲಾಂಛನವನ್ನು ಬಿಡುಗಡೆ ಮಾಡಿದ ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ
ರಾಷ್ಟ್ರಮಟ್ಟದಲ್ಲಿ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ 4 ವಿದ್ಯಾರ್ಥಿಗಳಿಗೆ ಸನ್ಮಾನ
Leave a Comment