ಹೊನ್ನಾವರ , ಕಾರವಾರದಲ್ಲಿ ನಡೆದ ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾವೇಶ ಜರುಗಿತು. ಜಿಲ್ಲೆಯ ಮೂವರು ಶಿಕ್ಷಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಕ್ಕೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸುರೇಶ ತಾಂಡೇಲರಿಗೆ ಪಿಎಚ್ಡಿ ಸಾಧನೆಗಾಗಿ, ಉಮೇಶ ಭಟ್ ಕುಮಟಾ ಇವರಿಗೆ ರಾಜ್ಯಮಟ್ಟದ ಹಿಂದಿ ಭಾಷಾ ಸಂಪನ್ಮೂಲ ವ್ಯಕ್ತಿ ಆಗಿರುವುದರಿಂದ ಮತ್ತು ರಾಜು ನಾಯ್ಕ ಕುಮಟಾ ಇವರು ಸ್ಕೌಟ್ ಮೂಲಕ 8 ವಿವಿಧ ದೇಶಗಳನ್ನು ಸಂದರ್ಶಿಸಿ ಅಲ್ಲಿಯ ಸಂಸ್ಕ್ರತಿಯನ್ನು ಅಧ್ಯಯನ ಮಾಡಿದ್ದರಿಂದ ಸನ್ಮಾನಿಸಲಾಯಿತು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಿಕ್ಷಣ ಸಚಿವ ಎಂ.ಮಹೇಶ, ವಿಧಾನ ಪರಿಷತ್ ಸದಸ್ಯ ಎಸ್.ವೈ.ಸಂಕನೂರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯ್ಕ ಮತ್ತು ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ದೊಡ್ಡಮನಿ ಮತ್ತಿತರರು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Leave a Comment