• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ

November 1, 2018 by Yogaraj SK Leave a Comment

ಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ ಕನ್ನಡ ಬೃಹತ್ ಬಾವುಟಗಳನ್ನು, ಬ್ಯಾನರ್, ಬಂಟಿಗ್ಸ್‍ಗಳನ್ನು ಹಚ್ಚುವ ಮೂಲಕ ರಾಜ್ಯೋತ್ಸವಕ್ಕೆ ಕಳೆ ತಂದಿದ್ದಾರೆ ಅಲ್ಲದೇ ಕನಾಟಕ ರಕ್ಷಣಾ ವೇದಿಕೆಯವರು 196 ಅಡಿ(63 ಮೀಟರ್) ಉದ್ದದ ಬೃಹತ್ ಕನ್ನಡ ಬಾವುಟದ ಪ್ರದರ್ಶನ ಹಾಗೂ ಮೇರವಣಿಗೆ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾಕಷ್ಟು ಮೇರಗು ನೀಡಿತು.
ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ಅರ್ಬನ್ ವೃತ್ತದಲ್ಲಿರುವ ಸಂಗೋಳ್ಳಿ ರಾಯಣ್ಣ ಪುಥ್ಥಳಿ, ಶಿವಾಜಿ ವೃತ್ತದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಪ್ರತಿಮೆ, ಬಸವೇಶ್ವರ ಪುಥ್ಥಳಿ ಮತ್ತು ಕನ್ನಡಾಂಭೆದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಯ ಕರ್ನಾಟಕ ಸಂಘಟನೆಯವರು ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು.
ಬೆಳಿಗ್ಗೆ ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗಳಿ ಧ್ವಜಾರೋಹಣ ನೆರವೆರಿಸಿ ಮಾತನಾಡಿ ನಾಡು ನುಡಿ, ರಾಷ್ಟ್ರದ ಬಗ್ಗೆ ಎಲ್ಲರು ಅಭಿಮಾನ ಹೊಂದಿರಬೇಕು ನೆಲ,ಜಲ ರಕ್ಷಣೆ ಹಾಗೂ ಅಭಿವೃದ್ದಿಗೆ ಎಲ್ಲರೂ ಕೈಜೋಡಿಸಿ ಶ್ರಮಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ವಚ್ಚತಾ ಅಭಿಯಾನದಲ್ಲಿ ನಿರಂತರವಾಗಿ ಪಾಲ್ಗೊಂಡವರನ್ನು, ಕನ್ನಡ ಮಾಧ್ಯಮದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ಥಬ್ದ ಚಿತ್ರ
ಇಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೇರವಣಿಗೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಬಳಿಕ ಪಥ ಸಂಚಲನ, ಪ್ರಭಾತ ಪೇರಿ ಹಾಗೂ 63ಮೀ. ಉದ್ದದ ಕನ್ನಡ ಬಾವುಟದ ಮೇರವಣಿಗೆಯು ವಿವಿಧ ರೂಪಕಗಳೊಂದಿಗೆ ಜಾಥಾ ನಡೆಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಬಸವರಾಜ ಬೆಂಡಿಗೇರಿಮಠ, ಜಯ ಕರ್ನಾಟಕ ಸಂಘಟನೆಯ ವಿಲಾಸ ಕಣಗಲಿ, ಜೀಜಾಮಾತಾ ಸಂಘಟನೆಯ ಮಂಗಲಾ ಕಶೀಲಕರ, ಎಪಿಎಮ್‍ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ತಾಪಂ ಸದಸ್ಯರು, ಪುರಸಭೆ ಎಲ್ಲ ನೂತನ ಸದಸ್ಯರು, ಮುಖಂಡ ರಾಜೂ ಧೂಳಿ, ಹಿರಿಯ ನಾಗರಿಕ, ಕ್ಷೇಮಾಭಿವೃದ್ದಿ ಸಂಘದವರು, ಸಿಂಹಕೂಟದವರು, ತಾಪಂ ಇಓ ಮಹೇಶ ಕುರಿಯವರ, ಅಧಿಕಾರಿ ವರ್ಗದವರು ಮೊದಲಾದವರು ಇದ್ದರು.

 kannada rajyotsava 2018, celebration watermarked IMG 20181101 WA0291 watermarked IMG 20181101 WA0292  kannada rajyotsava 2018, celebration  kannada rajyotsava 2018, celebration  kannada rajyotsava 2018, celebration kannada rajyotsava 2018, celebration  kannada rajyotsava 2018, celebration  kannada rajyotsava 2018, celebration  kannada rajyotsava 2018, celebration  kannada rajyotsava 2018, celebration  kannada rajyotsava 2018, celebration  kannada rajyotsava 2018, celebration

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Trending, Haliyal News Tagged With: 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ, celebration, kannada rajyotsava 2018, ಅಭಿವೃದ್ದಿಗೆ, ಅರ್ಬನ್ ವೃತ್ತ, ಕನ್ನಡ, ಕನ್ನಡ ರಾಜ್ಯೋತ್ಸವ, ಜಲ ರಕ್ಷಣೆ, ಡಾ. ಬಾಬಾಸಾಹೇಬ ಅಂಬೇಡ್ಕರ ಪುತ್ಥಳಿ, ನೆಲ, ಬಂಟಿಗ್ಸ್‍ಗಳನ್ನು ಹಚ್ಚುವ ಮೂಲಕ, ಬೀದಿ, ಬೃಹತ್ ಬಾವುಟಗಳನ್ನು, ಬ್ಯಾನರ್‍, ಯಲ್ಲಾಪೂರ ನಾಕಾ, ರಾಜ್ಯೋತ್ಸವಕ್ಕೆ ಕಳೆ, ವೃತ್ತಗಳಲ್ಲಿ, ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ, ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...