• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರಿ ಶಾಲೆ‌ ಮುಚ್ಚಿದರೇ‌ ರಾಜ್ಯಾದ್ಯಂತ ಊಗ್ರ ಹೋರಾಟ‌- ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಖಡಕ್ ಎಚ್ಚರಿಕೆ. ಹಳಿಯಾಳ‌ ಸಕ್ಕರೆ ಕಾರ್ಖಾನೆ‌ಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆಯೂ ಆಗ್ರಹ

November 4, 2018 by Yogaraj SK Leave a Comment

Jay karnataka sangh -Prog State president ramchandrappa attended

ಹಳಿಯಾಳ:- ಖಾಸಗಿ ಶಾಲೆಗಳಿಗೆ ಆದ್ಯತೆ ನೀಡುವ ಮೂಲಕ ಸರ್ಕಾರ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ ಸಂಗತಿಯಾಗಿದ್ದು ಮತ್ತೇ ಸರ್ಕಾರಿ ಶಾಲೆಗಳನ್ನು ಬಂದ್(ಮುಚ್ಚಲು) ಮಾಡಲು ಹೊರಟರೇ ಜಯ ಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಊಗ್ರ ಹೋರಾಟ ನಡೆಸಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಎಚ್ಚರಿಕೆ ನೀಡಿದರು.

Jay karnataka sangh -Prog State president ramchandrappa attended
63ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದ 7ನೇ ವಾರ್ಷಿಕೋತ್ಸವ ಅಂಗವಾಗಿ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕನ್ನಡ ರಸಮಂಜರಿ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು ಹಳಿಯಾಳ ಪಟ್ಟಣದಲ್ಲಿ ನಿಂತಿರುವ ದೊಡ್ಡ ಸಂಗೋಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣ ಚೆನ್ನಮ್ಮ ಪ್ರತಿಮೆ ಸ್ಥಾಪನೆ ಮಾಡಲೆಬೇಕೆಂದು ಆಗ್ರಹಿಸಿದರು.

Jay karnataka sangh -Prog State president ramchandrappa attended
ಸಂಘಟನೆಯಲ್ಲಿ 40 ಲಕ್ಷ ಸದಸ್ಯರಿದ್ದು ಸಮಾಜ ಸೇವೆಯೇ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಯುವಕರು ದುಶ್ಚಟಗಳಿಂದ ದೂರವಿರಬೇಕು ಮಾತ್ರವಲ್ಲದೇ ಮೊಬೈಲ್‍ಗಳನ್ನು ಕಡಿಮೆ ಬಳಕೆ ಮಾಡಿ ಎಂದು ಕರೆ ನೀಡಿದರು.

Jay karnataka sangh -Prog State president ramchandrappa attended
ಅನ್ನದಾತನಾದ ರೈತ ಇಂದು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾನೆ. ರೈತನಿಗೆ ಬೆನ್ನೆಲುಬಾಗಿ ನಾವು ನಿಲ್ಲಬೇಕಿದೆ ಎಂದ ಚಂದ್ರಪ್ಪಾ ರೈತರಿಗೆ ಸಕಾಲದಲ್ಲಿ ಅವರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಿ ರೈತರಿಗೆ ಪ್ರೋತ್ಸಾಹ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

watermarked IMG 20181104 WA0079
ಸ್ಥಳೀಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ, ರೈತರ ಬಾಕಿ ಹಣ ನೀಡುತ್ತಿಲ್ಲ ಮಾತ್ರವಲ್ಲದೇ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡದೆ ಅನ್ಯಾಯವೆಸಗುತ್ತಿರುವ ಕುರಿತು ಕಿಡಿಕಾರಿದ ರಾಜ್ಯಾಧ್ಯಕ್ಷರು ಕಂಪೆನಿ ಕೂಡಲೇ ತನ್ನ ವರಸೆ ಬದಲಿಸಿ ರೈತರಿಗೆ ಸಹಕರಿಸದೆ ಇದ್ದರೇ ಇಂತಹ ಇತರ ಕಂಪೆನಿಗಳ ವಿರುದ್ದವು ರಾಜ್ಯದ್ಯಂತ ಏಕಕಾಲದಲ್ಲಿ ಊಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Jay karnataka sangh -Prog State president ramchandrappa attended
ರಸಮಂಜರಿ ಕಾರ್ಯಕ್ರಮಕ್ಕೂ ಮುನ್ನ ಸಂಘಟನೆಯ ಹಳಿಯಾಳ ಘಟಕದವರು ಚಂದ್ರಪ್ಪನವರನ್ನು ತೆರೆದ ವಾಹನದಲ್ಲಿ ಬೈಕ್ ರ್ಯಾಲಿಯ ಮೂಲಕ ಭವ್ಯ ಸ್ವಾಗತ ಕೊರಿದರು. ಬಸವೇಶ್ವರ, ಶಿವಾಜಿ ಮಹಾರಾಜರು, ಸಂಗೋಳ್ಳಿ ರಾಯಣ್ಣ ಪುಥ್ಥಳಿಗಳಿಗೆ ಹಾಗೂ ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

watermarked IMG 20181104 WA0078
ಹಳಿಯಾಳದ ಆದಿಶಕ್ತಿಮಠದ ಕೃಷ್ಣಾನಂದ ಭಾರತಿ ಸ್ವಾಮಿಗಳು ಹಾಗೂ ಮಿಲಾಗ್ರಿಸ್ ಚರ್ಚನ ಫಾದರ್ ಜ್ಞಾನಪ್ರಕಾಶರಾವ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಹಳಿಯಾಳ ಹಿರಿಯ ಪತ್ರಕರ್ತ ದಿ.ಅರುಣ ಕಾಶೀನಾಥ ನಾಯ್ಕ ಹಾಗೂ ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರಿಗೆ ಮೌನಾಚರಣೆ ಮಾಡುವ ಮೂಲಕ ಶೃದ್ದಾಂಜಲಿ ಸಲ್ಲಿಸಲಾಯಿತು. ಸುಮಾರು 3 ಗಂಟೆಗಳ ಕಾಲ ಕನ್ನಡ ರಸಮಂಜರಿ ಕಾರ್ಯಕ್ರಮ ವಿಜೃಂಭನೆಯಿಂದ ನಡೆದು ಸ್ಪರ್ದಾಳುಗಳಿಗೆ ಪ್ರಶಸ್ತಿ, ನೆನಪಿನ ಕಾಣ ಕೆ ನೀಡಿ ಪ್ರೋತ್ಸಾಹಿಸಲಾಯಿತು.

watermarked IMG 20181104 WA0077
ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಆನಂದ ರೆಡ್ಡಿ, ತಾಲೂಕಾಧ್ಯಕ್ಷ ವಿಲಾಸ ಕಣಗಲಿ, ಮುಂಡಗೊಡದ ಪಾಂಡುರಂಗ ಪವಾರ, ಯಲ್ಲಾಪೂರದ ವಿಲ್ಸನ್ ಫರ್ನಾಂಡಿಸ್, ಪ್ರಮುಖರಾದ ಶಿರಾಜ ಮುನವಳ್ಳಿ, ಸಂಪತ ಬೆಣಚೆಕರ, ಪಾಂಡುರಂಗ, ಮಂಜುನಾಥ ಕಲಕುಂಬಿ, ಅನಿಸ ಪಿರವಾಲೆ, ಗೋಪಿ ಮೇತ್ರಿ, ಕಿರಣ ಕಮ್ಮಾರ, ದತ್ತಾ ಬಾಂದೆಕರ, ಯಲ್ಲಪ್ಪಾ ಮಾಲವನಕರ, ವಿಕ್ರಾಂತ ಶೆಟ್ಟಿ, ಸುಭಾಷ ಕೊಲಕರ, ದುರ್ಗಪ್ಪಾ ಚಲವಾದಿ, ಬಸವರಾಜ ತಳವಾರ, ಮಹೇಶ ಹುಲಕೊಪ್ಪ, ಗಣೇಶ ಗೊಸಪ್ಪನವರ, ಮಹಾದೇವ ಮೊದಲಾದವರು ವೇದಿಕೆಯ ಮೇಲಿದ್ದರು.

watermarked IMG 20181104 WA0071

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News Tagged With: 40 ಲಕ್ಷ ಸದಸ್ಯರಿದ್ದು ಸಮಾಜ ಸೇವೆ, ಆದಿಶಕ್ತಿಮಠದ ಕೃಷ್ಣಾನಂದ ಭಾರತಿ ಸ್ವಾಮಿಗಳು, ಆರ್ ಚಂದ್ರಪ್ಪ, ಊಗ್ರ ಹೋರಾಟ, ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ, ಖಡಕ್ ಎಚ್ಚರಿಕೆ, ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ, ಪ್ಯಾರಿ ಸಕ್ಕರೆ ಕಾರ್ಖಾನೆ, ಮಿಲಾಗ್ರಿಸ್ ಚರ್ಚನ ಫಾದರ್ ಜ್ಞಾನಪ್ರಕಾಶರಾವ, ರೈತರಿಗೆ ಪ್ರೋತ್ಸಾಹ, ಸಂಗೋಳ್ಳಿ ರಾಯಣ್ಣ ವೃತ್ತ, ಸರ್ಕಾರಿ ಶಾಲೆ‌ ಮುಚ್ಚಿದರೇ‌ ರಾಜ್ಯಾದ್ಯಂತ ಊಗ್ರ ಹೋರಾಟ‌, ಸರ್ಕಾರಿ ಶಾಲೆಗಳನ್ನು ಬಂದ್

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...