• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

November 8, 2018 by Yogaraj SK Leave a Comment

Jay karntaka submitted memorandum,SUGAR COMPANY HALIYAL

ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ.
ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹಳಿಯಾಳದ ರೈತರು ತಮ್ಮ ಜಮೀನುಗಳನ್ನು ತ್ಯಾಗ ಮಾಡಿದ್ದರಿಂದ ಸಕ್ಕರೆ ಕಾರ್ಖಾನೆ ಹಳಿಯಾಳದಲ್ಲಿ ನೆಲೆಗೊಂಡಿದೆ. ಆದರೆ ಕಾರ್ಖಾನೆ ಆಡಳಿತ ಮಂಡಳಿಯವರು ಪ್ರತಿ ವರ್ಷ ಇಲ್ಲಿಯ ರೈತರ ಕಬ್ಬನ್ನು ಮೊದಲು ಕಟಾವು ಮಾಡದೆ ಮೇ ತಿಂಗಳಿನ ಸಮೀಪ ಕಟಾವು ಮಾಡುತ್ತಿರುವುದರಿಂದ ಇಳುವರಿ ಹಾಗೂ ತೂಕದಲ್ಲಿ ಕಡಿಮೆಯಾಗಿ ರೈತರು ಸಾಕಷ್ಟು ನಷ್ಠ ಅನುಭವಿಸುತ್ತಿದ್ದಾರೆಂದು ಆರೋಪಿಸಿದರು.
ಇಲ್ಲಿಯ ವಾತಾವರಣದಂತೆ ನೀರಿನ ಕ್ಷಮತೆ ಅಷ್ಟು ದಿನ ಕೊಳವೆ ಬಾವಿ ಅಥವಾ ಕೆರೆ, ಹಳ್ಳಗಳಲ್ಲಿ ಇರುವದಿಲ್ಲ. ಇದರಿಂದ ಕೊನೆಯದಾಗಿ ಕಬ್ಬು ಕಳಿಸಿದ ರೈತರಿಗೆ ನೀರಿಲ್ಲದೆ ಮುಂದೆ ಕಬ್ಬು ಬೆಳಸಲು ತೊಂದರೆಯಾಗಿ ಅವರ ಜಮೀನಿನಲ್ಲಿಯ ಕಬ್ಬು ಇಳುವರಿ ಕಡಿಮೆಯಾಗಿ ಆ ರೈತರು ಆರ್ಥಿಕವಾಗಿ ಹಿಂದುಳಿಯುತ್ತಿದ್ದಾರೆಂದ ರಾಮಚಂದ್ರಪ್ಪ ಕಂಪೆನಿಯವರು ಜನೇವರಿ ತಿಂಗಳಿನ ಕೊನೆಯಲ್ಲಿಯೇ ಹಳಿಯಾಳ ಸುತ್ತಮುತ್ತಲಿನ ಸ್ಥಳೀಯ ರೈತರ ಕಬ್ಬು ಕಟಾವು ಮಾಡಬೇಕೆಂದು ಆಗ್ರಹಿಸಿದರು.
ಹಳಿಯಾಳದಲ್ಲಿ ಸಾಕಷ್ಟು ನಿರುದ್ಯೋಗಿಗಳಿದ್ದು ಸ್ಥಳಿಯವಾಗಿ ಕಾರ್ಖಾನೆ ಇದ್ದರು ಹೊರಗಿನವರಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿರುವುದು ಖಂಡನೀಯ ಎಂದ ಅವರು ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡದೆ ಇದ್ದರೇ ಮುಂದಿನ ದಿನಗಳಲ್ಲಿ ಊಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ರೈತರ ಬಾಕಿ ಹಣ 305 ರೂ.ವನ್ನು ಕೂಡಲೇ ಅವರಿಗೆ ನೀಡುವಂತೆಯು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಆನಂದ ರೆಡ್ಡಿ, ತಾಲೂಕಾಧ್ಯಕ್ಷ ವಿಲಾಸ ಕಣಗಲಿ, ಶಿರಾಜ ಮುನವಳ್ಳಿ, ಅನಿಸ ಪಿರವಾಲೆ, ಗೋಪಿ ಮೇತ್ರಿ, ಕಿರಣ ಕಮ್ಮಾರ, ದತ್ತಾ ಬಾಂದೆಕರ, ಶರತ ಶೆಟ್ಟಿ, ವಿನೋದ ಗಿಂಡೆ, ಯಲ್ಲಪ್ಪಾ ಮಾಲವನಕರ, ವಿಕ್ರಾಂತ ಶೆಟ್ಟಿ, ಸುಭಾಷ ಕೊಲಕರ, ದುರ್ಗಪ್ಪಾ ಚಲವಾದಿ, ಬಸವರಾಜ ತಳವಾರ, ಮಹೇಶ ಹುಲಕೊಪ್ಪ, ಗಣೇಶ ಗೊಸಪ್ಪನವರ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News, Other Tagged With: ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆ, ಜಯ ಕರ್ನಾಟಕ ಸಂಘಟನೆ ಆಗ್ರಹ, ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ, ರಾಮಚಂದ್ರಪ್ಪ ನೇತೃತ್ವದಲ್ಲಿ, ಸ್ಥಳೀಯ ಪದಾಧಿಕಾರಿಗಳು, ಸ್ಥಳೀಯ ರೈತರ ಕಬ್ಬು ಕಟಾವಿಗೆ, ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ, ಹಳಿಯಾಳದ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...