• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 13, 2018 by Yogaraj SK Leave a Comment

watermarked 05Dandeli1

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ ಅವರು ದಾಂಡೇಲಿಯಲ್ಲಿ ಸರ್ವ ಧರ್ಮ ಸಮನ್ವಯತೆಯನ್ನು ಜನಮಾನಸದಲ್ಲಿ ಅಚ್ಚಳಿಯದೆ ಊಳಿಯುವಂತಹ ಕೆಲಸವನ್ನು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳ ಮಾಡುತ್ತಿರುವುದು ಅಭಿನಂದನೀಯ ಎಂದರು.
ಧಾರ್ಮಿಕ, ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಜೊತೆಗೆ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಯುವಕ ಮಂಡಳ ಜಿಲ್ಲೆಯಲ್ಲೆ ಮೊದಲ ಬಾರಿಗೆ ಎನ್ನಬಹುದಾದ ಪತಿ-ಪತ್ನಿಯರಿಗಾಗಿ ಮಿಕ್ಸೆಡ್ ಡಬ್ಬಲ್ಸ್ ಪಂದ್ಯಾವಳಿಯನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ. ದಾಂಡೇಲಿಯಲ್ಲಿ ಬ್ಯಾಡ್ಮಿಂಟನ್ ಕ್ರೀಡೆಗೆ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶದಿಂದ ಒಳ ಕ್ರೀಡಾಂಗಣಕ್ಕೆ ಬೇಕಾಗುವ ಅವಶ್ಯ ಸೌಲಭ್ಯಗಳನ್ನು ಒದಗಿಸಲು ಸಚಿವ ದೇಶಪಾಂಡೆಯವರು ಪ್ರಾಮಾಣ ಕ ಪ್ರಯತ್ನಿಸಲಿದ್ದಾರೆ. ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಹಾಗೂ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದವರು ಬ್ಯಾಡ್ಮಿಂಟನ್ ಕ್ರೀಡಾ ಸುದಾರಣೆಗಾಗಿ ನೀಡಿದ ಮನವಿಗೆ ಸಕಾಲಿಕವಾಗಿ ಸ್ಪಂದಿಸುವ ಭರವಸೆ ನೀಡಿ ಪಂದ್ಯಾವಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಅಧ್ಯಕ್ಷ ಎಸ್.ಪ್ರಕಾಶ ಶೆಟ್ಟಿಯವರು ವಹಿಸಿ ಮಾತನಾಡುತ್ತಾ, ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಸಮಾಜಮುಖಿ ಕಾರ್ಯವನ್ನು ಕೊಂಡಾಡಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಬ್ಯಾಡ್ಮಿಂಟನ್ ಕ್ರೀಡೆಗೆ ಹೆಚ್ಚಿನ ಒತ್ತು ಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಅದರ ಫಲಶೃತಿಯಾಗಿ ದಾಂಡೇಲಿಯ ಏಳೆಂಟು ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಿಗೊಂದರಂತೆ ಪಂದ್ಯಾವಳಿಯನ್ನು ಆಯೋಜಿಸುವ ಉದ್ದೇಶವಿದೆ ಎಂದರು.
ಹಿರಿಯ ಶಟ್ಲ್ ಬ್ಯಾಡ್ಮಿಂಟನ್ ಆಟಗಾರ ಇನಾಜ್ ವಾಜ್ ಅವರು ಪಂದ್ಯಾವಳಿಗೆ ಶುಭಕೋರಿ ಮಾತನಾಡಿದರು. ವೇದಿಕೆಯಲ್ಲಿ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ, ಸಮಾಜ ಸೇವಕರುಗಳಾದ ಸಂತೋಷ್ ಶೆಟ್ಟಿ, ವಿಜಯ್ ಕುಮಾರ್ ಶೆಟ್ಟಿ, ಪೀಟರ್‍ಪೌಲ್ ಗೋನ್ಸಾಲಿಸ್, ನವೀನ ಕಾಮತ್, ಡಾ: ಸಲ್ಮಾನ್ ಗೈಮಾ, ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಸತ್ತುರಾಮ ಧರೇಕರ, ಮುರುಗೇಶ ನಾಯರ್, ಚಂದ್ರು ಆರ್ಯ, ಅಬ್ಬಸಾಲಿ, ಪ್ರಶಾಂತ ಶಿಳ್ಳಿನ, ಡಿ.ಜೆ.ಪ್ರಕಾಶ, ಪಾಸ್ಕಲ್ ಪರ್ನಾಂಡೀಸ್, ಯಾಹೋನಾ.ಓ.ಹರಿಜನ, ಮನೋಜ್.ಪಿ.ಕುರುಬಗಟ್ಟಿ, ಸಚ್ಚಿನ್ ಜಾಧವ, ಶುಭಂ, ಪ್ರಜ್ವಲ್, ಮೊದಲಾದವರು ಉಪಸ್ಥಿತರಿದ್ದರು. ಯುವಕ ಮಂಡಳದ ಅಧ್ಯಕ್ಷ ಸಂದೇಶ್.ಎಸ್.ಜೈನ್ ಕಾರ್ಯಕ್ರಮ ನಿರ್ವಹಿಸಿರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 42 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಗಮನ ಸೆಳೆದ ಪಂದ್ಯಾವಳಿ : ಮಕ್ಕಳಿಗೆ ಹಾಗೂ ಪತಿ ಪತ್ನಿಯರಿಗಾಗಿ ಒಟ್ಟು ಎರಡು ದಿನಗಳವರೆಗೆ ಪಂದ್ಯಾವಳಿಯೂ ಅಚ್ಚುಕಟ್ಟು ವ್ಯವಸ್ಥೆಯಿಂದ ಗಮನ ಸೆಳೆಯಿತು. ಪುಟಾಣ ಅಂಗನವಾಡಿ ಕೇಂದ್ರ, ಪ್ರಾಥಮಿಕ ಚಿಕಿತ್ಸಾ ಕೇಂದ್ರ ಹೀಗೆ ವಿವಿಧ ಆಕರ್ಷಕ ವ್ಯವಸ್ಥೆಗಳಿಂದ ಪಂದ್ಯಾವಳಿ ವಿಭಿನ್ನವಾಗಿ ಮೂಡಿಬಂತು. ಪತಿ-ಪತ್ನಿಯರು ಸಂಭ್ರಮದಿಂದ ಆಟವಾಡಿ ಪಂದ್ಯಾವಳಿಗೆ ಶೋಭೆ ತಂದರು.

watermarked 05Dandeli1a

ನೀರಿನಲ್ಲಿ ತೇಲಾಡುವ ಪ್ರಾಣಾಯಾಮ:
ಹಳಿಯಾಳದ ಪ್ರಸಾದ ಹುಣ್ಸವಾಡಕರ ಅವರಿಂದ ಒಳಕ್ರೀಡಾಂಗಣದ ಆವರಣದಲ್ಲಿರುವ ಈಜುಕೊಳದಲ್ಲಿ ಸುಮಾರು 45 ನಿಮಿಷಗಳವರೆಗೆ ತೇಲಾಡುವ ಪ್ರಾಣಾಯಾಮವು ನಡೆದು ಆಕರ್ಷಣೆಗೆ ಪಾತ್ರವಾಯಿತು.

ನೀರಿನಲ್ಲಿ ತೇಲಾಡುವ ಪ್ರಾಣಾಯಾಮ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News Tagged With: ಅಚ್ಚುಕಟ್ಟು ವ್ಯವಸ್ಥೆ, ಅಸೋಶಿಯೇಶನ್, ಈಜುಕೊಳದಲ್ಲಿ ಸುಮಾರು 45 ನಿಮಿಷಗಳವರೆಗೆ, ಎರಡು ದಿನಗಳವರೆಗೆ ಪಂದ್ಯಾವಳಿಯೂ, ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಒಳಕ್ರೀಡಾಂಗಣದ ಆವರಣ, ಗಮನ ಸೆಳೆದ, ಜೊಯಿಡಾ, ತೇಲಾಡುವ ಪ್ರಾಣಾಯಾಮ, ದಾಂಡೇಲಿ ಬ್ಯಾಡ್ಮಿಂಟನ್, ಧಾರ್ಮಿಕ, ನೀರಿನಲ್ಲಿ ತೇಲಾಡುವ ಪ್ರಾಣಾಯಾಮ, ಪತಿ ಪತ್ನಿಯರಿಗಾಗಿ ಒಟ್ಟು, ಪತಿ-ಪತ್ನಿಯರಿಗಾಗಿ, ಪ್ರಾಣಾಯಾಮ, ಮಕ್ಕಳಿಗೆ, ಮಟ್ಟದ, ಮಿಕ್ಸೆಡ್ ಡಬಲ್ಸ್, ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ, ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ, ಸಾಮಾಜಿಕ, ಸಾಂಸ್ಕøತಿಕ ಕಾರ್ಯಕ್ರಮ, ಸ್ಥಳೀಯ ಗಾಂಧಿನಗರ, ಹಳಿಯಾಳ, ಹಳಿಯಾಳದ ಪ್ರಸಾದ, ಹುಣ್ಸವಾಡಕರ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...