• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ

November 22, 2018 by Gaju Gokarna Leave a Comment

watermarked RVD Speech

ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತವನ್ನು ಸರಕಾರದ ಮಟ್ಟದಲ್ಲಿ ಪುರಸಭೆಯನ್ನಾಗಿ ಮಾಡಲೂ ಸರ್ವಪ್ರಯತ್ನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಹೇಳಿದರು.
ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಟ್ಟಣದಲ್ಲಿ ಸುಮಾರು ಇಪ್ಪತೈದು ಸಾವಿರ ಜನಸಂಖ್ಯೆ ಇದ್ದು, ಪಟ್ಟಣ ಪಂಚಾಯತಗೆ ಸರಕಾರದಿಂದ ಬರುವ ಅನುದಾನವು ಯಾವುದಕ್ಕೂ ಸಾಲದಾಗಿದ್ದೂ, ಪುರಸಭೆಯನ್ನಾಗಿ ಮಾರ್ಪಡಿಸಿದ್ದಲ್ಲಿ ಹೆಚ್ಚಿನ ಅನುದಾನ ಬರುವುದರಿಂದ ನಗರದ ಅಭಿವೃದ್ಧಿ ಸಾಧ್ಯ ಎನ್ನುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತಂಗೇರಿಯವರ ಮನವಿಗೆ ಉತ್ತರಿಸಿ ಮಾತನಾಡುತ್ತಿದ್ದರು.

ಮುಂದುವರಿದು ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹಾತ್ವಾಕಾಂಕ್ಷೆಯ “ಶಕ್ತಿ” ಯೋಜನೆಗೆ ಕಾರ್ಯಕರ್ತರು ಕೈಜೋಡಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳು ಕಳೆದಿದ್ದರೂ, ಕಾರ್ಯಕರ್ತರು ಸೋಲಿನ ಆತಂಕದಿಂದ ಇನ್ನೂ ಹೊರಬಂದಂತೆ ಕಾಣುತ್ತಿಲ್ಲಾ. ಆದರೆ ಸೋಲೆ ಗೆಲುವಿನ ಮೆಟ್ಟಿಲು ಇದ್ದ ಹಾಗೇ, ಭವಿಷ್ಯದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಜ್ವಲ ಭವಿಷ್ಯವಿದ್ದು, ಮಧ್ಯಪ್ರದೇಶ, ಚತ್ತಿಸಗಡ, ತ್ರಿಪುರ ರಾಜಸ್ಥಾನ, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.

 

 

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಎಲ್ಲರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್.ವಿ. ದೇಶಪಾಂಡೆಯವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ದಿವ್ಯಶಕ್ತಿ ತುಂಬಿದಂತಾಗಿದ್ದು, ಕಾರ್ಯಕರ್ತರು ಸಂತಸಗೊಂಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಹೊನ್ನಾವರದಲ್ಲಿ ಇ-ಸ್ವತ್ತು ಮಾಡಲೂ ಜನರು ಪರದಾಡುತ್ತಿದ್ದು ಸರಕಾರದ ಮಟ್ಟದಲ್ಲಿ ಈ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು. ಮತ್ತು ಹಿಂದಿನ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದ ‘ಇಂದಿರಾ ಕ್ಯಾಂಟಿನ್’ ನ್ನು ಹೊನ್ನಾವರದಲ್ಲಿ ತಕ್ಷಣ ಆರಂಭಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವರಿಗೆ ಮನವಿ ನೀಡಲಾಯಿತು.
-2-
ಸಭೆಯಲ್ಲಿ ಮಾಜಿ ಶಾಸಕಿ ಶಾರದಾ ಶೆಟ್ಟಿ, ಮಾಜಿ ಶಾಸಕ ಮಂಕಾಳ ವೈಧ್ಯ, ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷೆ ರಾಜಶ್ರೀ ಬಾಲಚಂದ್ರ ನಾಯ್ಕ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಎಲ್. ನಾಯ್ಕ, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಾಯಾಸ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ನಾಯ್ಕ, ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಹುಸೆನ ಖಾದ್ರಿ, ಬ್ಲಾಕ್ ಕಾಂಗ್ರೆಸ್ ಪ್ರದಾಧಿಕಾರಿಗಳಾದ ವಿನಾಯಕ ಶೇಟ್, ದಾಮೋದರ ನಾಯ್ಕ, ಮುಸಾ ಅಣ್ಣಿಗೇರಿ, ಬಾಲಚಂದ್ರ ನಾಯ್ಕ, ಪಂ. ಪಂ. ಸದಸ್ಯರಾದ ಜೋಸ್ಪಿನ್ ಡಾಯಸ್, ಸುರೇಶ ಮೇಸ್ತ, ಜಮೀಲಾ ಶೇಖ್, ತುಳಸಿದಾಸ ಪುಲ್ಕರ, ಮಾದೇವ ನಾಯ್ಕ, ಸಾಲ್ವಾದೋರ ಫರ್ನಾಂಡಿಸ್ ಇನ್ನೂ ನೂರಾರು ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

watermarked RVD Swagath watermarked President Speech watermarked BCC Memorandum

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Trending Tagged With: ಅಧ್ಯಕ್ಷ ಜಗದೀಪ ತಂಗೇರಿಯವರ ಮನವಿ, ಇಪ್ಪತೈದು ಸಾವಿರ ಜನಸಂಖ್ಯೆ, ಕರ್ನಾಟಕ ರಾಜ್ಯದ ಕಂದಾಯ, ಕಾರ್ಯಕರ್ತರು ಕೈಜೋಡಿಸಿ, ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ, ಭವಿಷ್ಯದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಜ್ವಲ ಭವಿಷ್ಯ, ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹಾತ್ವಾಕಾಂಕ್ಷೆಯ, ಶಕ್ತಿ ಯೋಜನೆ, ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಸಚಿವ ಆರ್.ವಿ.ದೇಶಪಾಂಡೆ, ಸೋಲೆ ಗೆಲುವಿನ ಮೆಟ್ಟಿಲು, ಹೊನ್ನಾವರ ಪಟ್ಟಣ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...