ಹಳಿಯಾಳ : ಮಕ್ಕಳಿಗೆ ಕ್ರೀಡೆಗಳ ಮೂಲಕ ಶಾರಿರೀಕ ಮತ್ತು ಮಾನಸಿಕ ಆರೋಗ್ಯ ಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕಾರ್ಯಕಾರಣ ಮಂಡಳಿಯ ಅಧ್ಯಕ್ಷ ಪ್ರಸಾದ ಆರ್ ದೇಶಪಾಂಡೆ ಅಭಿಪ್ರಾಯಪಟ್ಟರು.
ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ಶ್ರೀ ಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ- ಆದರ್ಶ ಗ್ರಾಮ ದೊಡ್ಡಕೊಪ್ಪ ಇವರ ಸಹಯೋಗದಲ್ಲಿ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದ ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ ಬ್ಯಾಗ್ ಮತ್ತು ಆಟದ ಸಾಮಗ್ರಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾ ಮಾತನಾಡಿ ಗ್ರಾಮೀಣ ಭಾಗದ ಬಡ ಜನರ ಮತ್ತು ಶಿಕ್ಷಣಕ್ಕೆ ಸಂಸ್ಥೆ ಸಹಾಯ ಮಾಡುತ್ತಿರುವುದು ಅಭಿನಂದನಾರ್ಹ. ಸ್ಫರ್ದಾತ್ಮಕ ಯುಗದಲ್ಲಿ ಮಕ್ಕಳು ತಾಳ್ಮೆ, ಉತ್ತಮ ನಡುವಳಿಕೆಗಳನ್ನು ಬೆಳಸಿಕೊಳ್ಳಬೇಕು. ಮಕ್ಕಳು ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಮತ್ತು ಪಾಲಕರು ತಮ್ಮ ಮಕ್ಕಳಿಗೆ ಸರ್ವಾಂಗಿಣ ಅಭಿವೃದ್ಧಿಗೆ ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು.
ಸಂಸ್ಥೆಯ ಹಿರಿಯ ಮಾರ್ಗದರ್ಶಿ ಅನಂತಯ್ಯಾ ಆಚಾರ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಗಳನ್ನು ಆಳವಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಉಜ್ವಲ ಭವಿಷ್ಯ ರೂಪಿಸಬೇಕೆಂದರು.
ಸಂಸ್ಥೆಯ ನೀರ್ದೇಶಕ ನಿತ್ಯಾನಂದ ಆರ್ ವೈದ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆ ನೀಡುತ್ತಿರುವ ಸ್ವ-ಉದ್ಯೋಗ ತರಬೇತಿಯ ಜೊತೆಗೆ ಗ್ರಾಮೀಣ ಭಾಗದ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಅನೇಕ ಮಾಹಿತಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ನೀಡಿ ಸಂಸ್ಥೆ ನೀಡುವ ಸೌಲಭ್ಯವನ್ನು ಸದುಪಯೊಗಪಡಿಸಿಕೊಂಡು ಈ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಪರಿವರ್ತಿಸಲು ಸಹಕರಿಸುವಂತೆ ಕರೆ ನೀಡಿದರು.
ಸಂಸ್ಥೆಯಿಂದ ಶಾಲೆಗೆ ಆಟದ ಸಾಮಗ್ರಿಗಳೊಂದಿಗೆ 35 ಶಾಲಾ ವಿಧ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬ್ರಹ್ಮಾ ಧಾರವಾಡಕರ, ಗಣಪತಿ ಸುಳಗೇಕರ, ಮಹಾದೇವ ಪವಾರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಮೇಶ ಪಾಟೀಲ್, ಎಸ್.ಎ.ಜಮಾದಾರ, ಯೊಜನಾ ಸಂಯೋಜಕ ವಿನಾಯಕ ಚವ್ಹಾಣ, ಸಂತೋಷ ಪರೀಟ, ಉಳವಯ್ಯಾ ಬೆಂಡಿಗೇರಿ, ಸಂತೋಷ ಸಿಧ್ನೇಕೊಪ್ಪ ಇದ್ದರು. ಶಿಕ್ಷಕಿ ಸುಶಿಲಾ ಕಾಂಬಳೆ ಹಾಗೂ ರೇಣುಕಾ ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು.
Leave a Comment