ಮುಂಡಗೊಡ :- ಸಾರಿಗೆ ಬಸ್ಸು ಹಾಗೂ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಲಾರಿ ಚಾಲಕ ಸ್ಥಳದಲ್ಲೇ ಅಸುನಿಗಿದರೇ ಬಸ್ ನಲ್ಲಿದ್ದ 20 ಕ್ಕೂ ಅಧಿಕ
ಜನರಿಗೆ ಗಾಯಗಳಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಗ್ರಾಮದ ರಾಜ್ಯ ಹೆದ್ದಾರಿ ಬಳಿ ಸಂಭವಿಸಿದೆ.
ಮೃತ ಲಾರಿ ಚಾಲಕ
ದ್ಯಾಮಣ್ಣ ಹನುಮಂತಪ್ಪ (೩೦) ಎನ್ನುವವನಾಗಿದ್ದಾನೆ.
ಇನ್ನೂ ಗಾಯಾಳುಗಳನ್ನು ಮುಂಡಗೋಡ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿ ಯಿಂದ ಶಿರಸಿಗೆ ಬರುತ್ತಿದ್ದ ಲಾರಿಗೆ ಹುಬ್ಬಳ್ಳಿಗೆ ಹೊರಟಿದ್ದ ಬಸ್ಸು ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಮುಂಡಗೋಡ ಫೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment