ಹಳಿಯಾಳ : – ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಶುಕ್ರವಾರ ಸಾಯಂಕಾಲ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಪವಿತ್ರಾ ಮೋಹನ ಪಾಟೀಲ್( ೧೫) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.
ತಾಯಿ ಲಲಿತಾ ಶಿಕ್ಷಣಕ್ಕೆ ಸಂಬಧಿಸಿದ ವಿಷಯದಲ್ಲಿ ಹಾಗೂ ಶಾಲೆಗೆ ಸರಿಯಾಗಿ ಹೊಗುವಂತೆ ಬೈದು ಬುದ್ದಿವಾದ ಹೇಳಿದ ಕ್ಷುಲ್ಲಕ ಕಾರಣ ಮುಂದಿಟ್ಟುಕೊಂಡು ವಿದ್ಯಾರ್ಥಿನಿ ತನ್ನ ಅಡುಗೆ ಮನೆಯಲ್ಲಿ ಇಟ್ಟಿದ್ದ ಸಿಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಸ್ಥಳಕ್ಕೆ ಹಳಿಯಾಳ ಸಿಪಿಐ ಲೊಕಾಪುರ ಬಿಎಸ್, ಪಿಎಸ್ ಐ ಆನಂದ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment