ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ ಮೇರೆಗೆ ನೀಡಿರುವ ಈ ಜವಾಬ್ದಾರಿಯನ್ನು ತಕ್ಷಣ ವಹಿಸಿಕೊಂಡು ಬ್ಲಾಕ್ ವ್ಯಾಪ್ತಿಯ ಪದಾಧಿಕಾರಿಗಳು, ಮುಖಂಡರು, ಜನಪ್ರತಿನಿಧಿಗಳ ಸಹಕಾರದೊಂದಿಗೆ “ಶಕ್ತಿ” ಯ ಗುರಿಯನ್ನು ತಲುಪಿ ಈ ನಿಟ್ಟಿನಲ್ಲಿ ಯಶಸ್ಸು ಸಾಧಿಸಬೇಕೆಂದು ಆದೇಶ ಪತ್ರದಲ್ಲಿ ಹೇಳಲಾಗಿದೆ.
ಬಾಲಚಂದ್ರ ನಾಯ್ಕ ಈ ಹಿಂದೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
Leave a Comment