• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ

December 5, 2018 by Gaju Gokarna Leave a Comment

watermarked hnr 05 NEWS 1 v.

ಹೊನ್ನಾವರ : ಸ್ವಾತಂತ್ರ್ಯ ಸಂಗ್ರಾಮದಿಂದಲೂ ದೇಶಕ್ಕೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ವಕೀಲರದ್ದಾಗಿದೆ. ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು.
ಅವರು ವಕೀಲರ ದಿನಾಚರಣೆಯ ಪ್ರಯುಕ್ತ ವಕಿಲರ ಸಂಘ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದ ಪ್ರಗತಿಗೆ ಪೂರಕವಾಗಿರುವ ಅನೇಕ ಯೋಜನೆಯ ರೂವಾರಿಗಳು ವಕೀಲರಾಗಿದ್ದಾರೆ. ಅವರು ಪಟ್ಟ ಶ್ರಮ, ಸಮಾಜ ಗುರುತಿಸಿದೆ. ಸಾಮಾಜಿಕ ಹೋರಾಟದಲ್ಲಿ ವಕೀಲರ ಪಾತ್ರ ಮಹತ್ವದ್ದಾಗಿದೆ. ಹಿಂದಿನಿಂದಲೂ ಸಮಾಜ ವಕೀಲರನ್ನು ಗೌರವಿಸಿ ಬಂದಿದೆ. ಆದರೆ ವಕೀಲ ವೃತ್ತಿಯಲ್ಲಿ ನಿರತರಾದವರಿಗೆ ಭದ್ರತೆಯ ಕೊರತೆ ಇದ್ದಂತಿದೆ. ಈ ನಿಟ್ಟಿನಲ್ಲಿ ವಕೀಲರ ಸಂಘ ಚಿಂತಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ದಿನಾಚರಣೆಯನ್ನು ಮಹತ್ವವನ್ನು ವಿವರಿಸಿದ ಸತೀಶ ಭಟ್ಟ ಉಳಗೇರೆ ಮಾತನಾಡಿ ನ್ಯಾಯದಾನದ ಪ್ರಕ್ರಿಯೆಯಲ್ಲಿ ನ್ಯಾಯಾಲಯದ ಒಟ್ಟೊಟ್ಟಿಗೆ ವಕೀಲರು ಸಹಕರಿಸಿದ್ದಲ್ಲಿ ಉತ್ತಮ, ಸತ್ವಯುತ, ವೇಗದ ನ್ಯಾಯಧಾನ ಕಕ್ಷಿದಾರರಿಗೆ ಸಿಗುವಂತಾಗುತ್ತದೆ. ಅದರಿಂದಾಗಿ ನ್ಯಾಯಾಲಯದ ಮೇಲಿನ ನಂಬಿಕೆ ಇನ್ನಷ್ಟು ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ ವಹಿಸಿದ್ದರು. ಕಾರ್ಯದರ್ಶಿ ಸೂರಜ್ ನಾಯ್ಕ ವಂದಿಸಿದರು. ಎಮ್.ಎಸ್. ಭಟ್ಟ ಕಾರ್ಯಕ್ರಮ ನಿರೂಪಿಸಿದರು.
ಕೊನೆಯಲ್ಲಿ ಶ್ರೀಧರ ಹೆಗಡೆ ಕಲಭಾಗ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು. ಗೌರೀಶ ಯಾಜಿ ಮತ್ತು ಎಮ್.ಎಸ್. ಭಟ್ಟ್ ತಬಲಾ ಸಾತ್ ನೀಡಿದರು.
ವಕೀಲರಾದ ಉಮಾ ಡಿ. ನಾಯ್ಕ, ಸುಜಾತಾ ಅಡಿ ಮತ್ತು ಶಾರದಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಾದ ದಿಕ್ಷಾ ಎಲ್. ನಾಯ್ಕ, ದೇವಿಕಾ, ಸೌಮ್ಯಾ ಶೆಟ್ಟಿ, ಸಹನಾ ಶ್ಯಾನಭಾಗ, ಅಧಿತಿ, ರಜತ್ ಸಂಗೀತಾ ಕಾರ್ಯಕ್ರಮ ನಡೆಸಿಕೊಟ್ಟರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News, Canara News Tagged With: ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ, ಉಳಿಸಿಕೊಳ್ಳುವ ಜವಾಬ್ದಾರಿ, ಯುವ ವಕೀಲ, ವಕೀಲರ ಘನತೆ ಗೌರವ, ಸಾಮಾಜಿಕ ಹೋರಾಟದಲ್ಲಿ ವಕೀಲರ ಪಾತ್ರ ಮಹತ್ವ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...