ಹೊನ್ನಾವರ: ತಾಲೂಕಿನ ಕಾಸರಕೋಡ ಸ್ನೇಹಕುಂಜದ ವಿವೇಕಾನಂದ ಆರೋಗ್ಯಧಾಮದಲ್ಲಿ ಸಾಹಿತಿ ವೆಂಭ ವಂದೂರು ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದು ಅಲ್ಲಿಯೇ ಅವರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ಅವರು ವೆಂಭ ವಂದೂರ ಭಾಮಿನಿ ಷಟ್ಪದಿಯಲ್ಲಿ ರಚಿಸಿರುವ ಮಾಸ್ಕೇರಿ ಗ್ರಾಮಯಾನ ಪುಸ್ತಕವನ್ನು ಬಿಡುಗಡೆ ಮಾಡಿದರು.
ಸಾಹಿತಿ ಡಾ. ಎಸ್.ಡಿ.ಹೆಗಡೆ ಈ ಸಂದರ್ಭದಲ್ಲಿ ಮಾತನಾಡಿ ವೆಂ.ಭ. ಅವರು ನೇರ ಮತ್ತು ನಿಷ್ಠುರವಾದಿಯಾಗಿದ್ದಾರೆ. ಅಪಾರ ಜ್ಞಾನ ಸಂಪತ್ತನ್ನು ಹೊಂದಿರುವ ಅವರು ಕನ್ನಡ, ಇಂಗ್ಲೀಷ್ ಹಾಗೂ ಸಂಸ್ಕøತದಲ್ಲಿ ಕವನಗಳನ್ನು ಬರೆದಿದ್ದಾರೆ. ಕೃತಿಗಳನ್ನು ರಚಿಸಿದ್ದಾರೆ ಎಂದರು.
ಸಾಹಿತಿ ಮಾಸ್ಕೇರಿ ಎಂ.ಕೆ.ನಾಯ್ಕ, ದಾಂಡೇಲಿಯ ಉಮಾನಾಥ ಪೈ, ಅಂಕೋಲಾದ ಮಹೇಶ ಹಾರವಾಡೆಕರ, ಗೌರೀಶ ಭಟ್, ಜಗದೀಶ ಶಾಸ್ತ್ರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Leave a Comment