ಹೊನ್ನಾವರ: ಜನರಲ್ಲಿ ಬಡತನ, ಬರಗಾಲ, ಮೂಲಭೂತ ಸಮಸ್ಯೆಗಳಿಂದ ನಮ್ಮನ್ನು ಆಳುವ ಸರ್ಕಾರಕ್ಕಿಂತ `ಕಣ ್ಣಗೆ ಕಾಣದ ಅಗೋಚರ ಶಕ್ತಿಯು ಕಾಪಾಡುತ್ತದೆ’ ಎಂಬ ನಂಬಿಕೆ ಜನರಲ್ಲಿ ಬಲವಾಗಿ ಬೇರೂರಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಹೇಳಿದರು.
ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಜನರು ತಮ್ಮೂರಿನ ರಸ್ತೆ, ನೀರು ಮುಂತಾದ ಮೂಲಭೂತ ಸಮಸ್ಯೆಗಳಿಗಿಂದ ದೇವಸ್ಥಾನಗಳ ಅಭಿವೃದ್ಧಿಗೆ ಹೇಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು ಕ್ಷಣ ಕ; ದೈವೀ ಶಕ್ತಿಯ ಪ್ರಭಾವ ಅತ್ಯಂತ ಮಹತ್ವವಾದುದು ಎಂಬ ಭಾವನೆ ಜನರಲ್ಲಿದೆ. ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಶ್ರಮಿಸುವ ಮೂಲಕ ಮುಂದಿನ ಜನಾಂಗಕ್ಕೆ ಇದನ್ನು ಕೊಡುಗೆಯಾಗಿ ನೀಡುವ ಕೆಲಸವಾಗಬೇಕು ಎಂದರು.
ಕಸಾಪ ತಾಲೂಕು ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಮಾತನಾಡಿ, ಧಾರ್ಮಿಕ ಕ್ಷೇತ್ರಗಳಿಗೆ ಜನರನ್ನು ಒಂದುಗೂಡಿಸುವ ಶಕ್ತಿಯಿದೆ. ಇವು ಸಾಂಸ್ಕøತಿಕ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೃಜನಶೀಲ, ರಚನಾತ್ಮಕ ಚಟುವಟಿಕೆಗಳನ್ನು ಮಾಡಲು ಅವಕಾಶ ಒದಗಲಿ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸರ್ಜನ್ ಡಾ. ಮಂಜುನಾಥ ಶೆಟ್ಟಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಹೆಗಡೆ, ಆರ್.ಪಿ.ನಾಯ್ಕ, ಅಯ್ಯಪ್ಪ ನಾಯ್ಕ, ದಯಾನಂದ ನಾಯ್ಕ, ಸುರೇಶ ಶಿವರಾಮ ನಾಯ್ಕ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ವರ್ಧಂತಿ ಉತ್ಸವದ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ, ಸಾಮೂಹಿಕ ಸತ್ಯನಾರಾಯಣ ವೃತ, ನವಚಂಡಿಹೋಮ, ಕಲಾಭೀಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂತರ್ಪಣೆ ನಡೆದವು.
Leave a Comment