• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ- ಭೀಮಣ್ಣ ನಾಯ್ಕ

December 24, 2018 by Nagaraj Naik Leave a Comment

watermarked IMG 20181224 WA0116
ಸಿದ್ದಾಪುರ :
ಜಿಲ್ಲೆಯಲ್ಲಿ ನಾಮಧಾರಿಗಳು ಬಹುಸಂಖ್ಯಾತರಿದ್ದೇವೆ. ಆರ್ಥಿಕ ಸುಧಾರಣೆಯ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಶಿಕ್ಷಣ ಕೊಡುವ ಮೂಲಕ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕಾಗಿದೆ ಎಂದು ಉದ್ಯಮಿ ಭೀಮಣ್ಣ ನಾಯ್ಕ ಶಿರಸಿ ಹೇಳಿದರು.
 ಅವರು ಪಟ್ಟಣದ ರಾಘವೇಂದ್ರಮಠದ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ, ಸಮಾಜದ ಎಲ್ಲರೂ ಒಂದಾಗಿ ಸಂಘಟನೆಯ ಶಕ್ತಿಯನ್ನು ಬಲಗೊಳಿಸಬೇಕು ಎಂದರು.
watermarked IMG 20181224 WA0118
 ಇಂದು ಉನ್ನತ ಶಿಕ್ಷಣಕ್ಕೆ ಹೋಗಲು ಸಾಕಷ್ಟು ಹಣದ ಅವಶ್ಯಕತೆ ಇರುತ್ತದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಆರ್ಥಿಕ ತೊಂದರೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು. ನಿಮ್ಮ ಜೊತೆಗೆ ಸಮಾಜ ಇದೆ ಸಂಘಟನೆ ಇರುವದನ್ನು ಮರೆಯಬಾರದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದ ಬಳ್ಳಾರಿಯ ಡಿವೈಎಸ್ಪಿ ಉಮೇಶ ನಾಯ್ಕ ಮಾತನಾಡಿ ಇನ್ನೊಬ್ಬರು ಸಹಾಯಮಾಡುತ್ತಾರೆಂದಲ್ಲ, ನಾನು ಸಾಧಿಸಬೇಕೆಂಬ ಛಲವನ್ನ ವಿದ್ಯಾರ್ಥಿಗಳು ಗಳಿಸಿಕೊಳ್ಳಬೇಕು ಎಂದರು.
ಎಸ್ಎಸ್ಎಲ್ ಸಿ, ಪಿಯುಸಿ, ಪದವಿ, ಹಾಗೂ ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
watermarked IMG 20181224 WA0117
 ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಜಿ. ಐ. ನಾಯ್ಕ, ಅಧ್ಯಕ್ಷತೆ ವಹಿಸಿದ್ದರು.
ಎಪಿಎಂಸಿ ಅಧ್ಯಕ್ಷ ಕೆ.ಜಿ ನಾಗರಾಜ, ಗುತ್ತಿಗೆದಾರ ಹನುಮಂತ ನಾಯ್ಕ ಕುಣಜಿ, ಬಿ.ಆರ್ ನಾಯ್ಕ ಹೆಗ್ಗಾರಕೈ, ಡಾ.ಲಕ್ಷ್ಮೀಕಾಂತ ನಾಯ್ಕ, ಜಿ.ಪಂ ಸದಸ್ಯೆ ಸುಮಂಗಲಾ ವಸಂತ ನಾಯ್ಕ, ರಂಗನಾಥ ಬಿ.ಎನ್ ಶಿರಸಿ, ಸಿ.ಎನ್ ನಾಯ್ಕ, ಕೆ.ಆರ್ ವಿನಾಯಕ ಇತರರಿದ್ದರು.
ಆರ್.ಆರ್ ನಾಯ್ಕ ಅವರಗುಪ್ಪ ಸ್ವಾಗತಿಸಿದರು. ಲೋಕೆಶ ಕೆ ನಾಯ್ಕ ವರದಿ ಓದಿದರು. ಉಮೇಶ ಪ್ರಾಸ್ತಾವಿಕ ಮಾತನಾಡಿದರು. ಎಂ.ಕೆ ನಾಯ್ಕ ಹೊಸಳ್ಳಿ ಪರಿಚಯಿಸಿದರು. ಮೊಹಿನಿ ನಾಯ್ಕ, ಎಂ.ಎನ್.ನಾಯ್ಕ ನಿರ್ವಹಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, SIDDAPURA Tagged With: ಆರ್ಥಿಕ ಸುಧಾರಣೆ, ಉದ್ಯಮಿ ಭೀಮಣ್ಣ, ಒಳ್ಳೆಯ ಕೊಡುಗೆ, ನೀಡಬೇಕಾಗಿದೆ, ಭೀಮಣ್ಣ ನಾಯ್ಕ, ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ರಾಘವೇಂದ್ರಮಠದ ಸಭಾಂಗಣ, ಶಿಕ್ಷಣ ಕೊಡುವ ಮೂಲಕ ಸಮಾಜ, ಸಂಘಟನೆಯ ಶಕ್ತಿ

Explore More:

About Nagaraj Naik

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...