ಬೆಂಗಳೂರು:- ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂಬಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಮಾತಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಅವರು, “ಕಾಂಗ್ರೆಸ್ ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಅನ್ನುಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು ಮಂತ್ರಿಗಳನ್ನಾಗಿ ಮಾಡಿದ್ದಾರೆ?’’ ಎಂದುಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಪಕ್ಷವು ಸಮಾನತೆಯ ತತ್ವದಲ್ಲಿ ನಂಬಿಕೆ ಇಟ್ಟಿದೆ. ಹೀಗಾಗಿ ರೇವಣ್ಣನವರ ಮಾತು ಸತ್ಯಕ್ಕೆ ದೂರವಾದುದು,’’ ಎಂದು ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.
Leave a Comment