ಹಳಿಯಾಳ: ಸರ್ಕಾರ ಸ್ವಸಹಾಯ ಸಂಘಗಳಿಗೆ ನೀಡಿದ ಸಹಾಯ-ಸೌಲಭ್ಯಗಳನ್ನು ದೊರುಪಯೋಗ ಪಡಿಸಿಕೊಳ್ಳದೆ- ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಉನ್ನತಿ ಸಾಧಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ವಸಾಯ ಸಂಘದ ಸದಸ್ಯರಿಗೆ ಕರೆ ನೀಡಿದರು.
ಪಟ್ಟಣದ ಡಾ.ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚಾರಣೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ. ಅಭಿವೃದ್ಧಿ ನಿಗಮ ಕಾರವಾರ ಹಾಗೂ ತಾ.ಪಂ ಆಡಳಿತ ಹಳಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಿದ್ದಿ ಪ್ಯಾಕೇಜ್ ಮೈಕ್ರೋ ಕ್ರೇಡಿಟ್ ಕಿರುಸಾಲ ಯೋಜನೆಯಡಿಯಲ್ಲಿ ಆಯ್ಕೆಯಾದ ಸಂಘದ ಸದಸ್ಯರಿಗೆ ಮಂಜೂರಾತಿ ಪ್ರಮಾಣ ಪತ್ರ ವಿತರಣೆ ಮತ್ತು ಕೇಂದ್ರಸರ್ಕಾರ ಸಂಯೋಗದೊಂದಿಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಫಲಾನುಭವಿಗಳಿಗೆ ಅಡುಗೆ ಅನಿಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಕಲಚೇತನರು ಸ್ವಾವಲಂಭಿ ಜೀವನ ನಡೆಸಲು ನಾವೆಲ್ಲರೂ ಸಹಾಯ ಮಾಡಬೇಕು. ಹಾಗೂ ಬಡತನದಿಂದ ದೂರಾಗಬೇಕಾದರೆ ಅವರ ಕಷ್ಟಕ್ಕೆ ಕೈಜೋಡಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಲ್ಲಿ ಹಾಗೂ ವಿವಿದ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಣೆ, ಮಾಡಲಾಯಿತು. ಮತ್ತು ಗಂಗಾ ಕಲ್ಯಾಣ ಸಿದ್ದಿ ಪ್ಯಾಕೇಜ ಯೋಜನೆಯಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುದ್ದಿಕರಣಗೊಳಿಸಲು ಫಲಾನುಭಾವಿಗಳಿಗೆ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಕಳೆದ ಡಿ.17ರಂದು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಟ್ಟೆ ತೊಳೆಯಲು ಹೋದ ನಾಲ್ವರು ಕಾಳಿನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಚೆಕ್ ವಿತರಿಸಲಾಯಿತು. ಮಕ್ಕಳ ಶಿಕ್ಷಣಕ್ಕಾಗಿ ಉಪಯೋಗವಾಗುವಂತೆ ನೋಡಿಕೊಳ್ಳಲು ಸಂಬಂಧಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ ರೇಣಕೆ, ಸದಸ್ಯ ಕೃಷ್ಣಾ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭಾಸ ಕೊರ್ವೇಕರ, ಸಿದ್ದಿ ಸಮುದಾಯದ ಮುಖ್ಯಸ್ಥ ಡೀಯೋಗ ಸಿದ್ದಿ, ತಾಪಂ ಅಧಿಕಾರಿ ಡಾ.ಮಹೇಶ ಕುರಿಯವರ, ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರಾದ ರವಿಂದ್ರ ಮೆಟಗುಡ್, ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಇದ್ದರು.
Leave a Comment