• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು.:ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ

January 10, 2019 by Gaju Gokarna Leave a Comment

ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು.
ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಇವರ ಆಶ್ರಯದಲ್ಲಿ ಶ್ರೀ ರಾಘವೇಶ್ವರ ಭಾರತಿ ಸವೇದ ಸಂಸ್ಕøತ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮುಗ್ವಾದಲ್ಲಿ ಆಯೋಜಿಸಿರುವ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹಾಗೂ ಗ್ರಾಮ ಪಂಚಾಯತ ಪ್ರತಿನಿಧಿಗಳಿಗೆ ಆಯೋಜಿಸಿದ ಜೈವಿಕ ಇಂಧನದ ಸದ್ಬಳಕೆಯ ಕುರಿತು ನಡೆದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.
ಉದ್ಘಾಟನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಗ್ವಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ ಮಾತನಾಡಿ ನಮ್ಮ ಪಂಚಾಯತದಲ್ಲಿ ಈ ಕಾರ್ಯಗಾರ ಆಯೋಜಿಸಿರುವುದಕ್ಕೆ ಸಂತೋಷವಾಗುತ್ತದೆ. ಇಲ್ಲಿ ನಮ್ಮ ವ್ಯಾಪ್ತಿಗೆ ಒಳಪಡುವ ಅನೇಕ ಸ್ವಸಹಾಯ ಗುಂಪುಗಳು ಆಗಮಿಸಿದೆ. ನೀವೆಲ್ಲ ಈ ತರಬೇತಿಯ ಪ್ರಯೋಜನವನ್ನು ಪಡೆಯಿರಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸ್ಥಳೀಯ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀಕಲಾ ಎಸ್. ಶಾಸ್ತ್ರಿ ಮಾತನಾಡಿ ಇದೊಂದು ಉತ್ತಮವಾದ ತರಬೇತಿ ಕಾರ್ಯಕ್ರಮ. ಬಹುತೇಕ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದೀರಿ. ಓರ್ವ ಮಹಿಳೆ ಈ ಕಾರ್ಯಗಾರದ ಉದ್ದೇಶವನ್ನು ಅರಿತುಕೊಂಡರೆ ಒಂದು ಕುಟುಂಬ ಅರಿತುಕೊಂಡಂತೆಯೇ ಸರಿ. ಏಕೆಂದರೆ ಈಗ ಮಹಿಳಾ ಪ್ರಧಾನ ಕುಟುಂಬವಾಗಿರುವುದರಿಂದ ಈ ತರಬೇತಿ ಯಸಶ್ವಿಯಾಗುತ್ತದೆ. ಎಂದು ಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿಗಳು ಹೊನ್ನಾವರದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ ನಮ್ಮ ಸುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದರ ಜೊತೆಗೆ ನೀರಿನ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ, ಶುದ್ಧ ಗಾಳಿಯ ಸಂರಕ್ಷಣೆ ಮಾಡಿದಾಗ ಮಾತ್ರ ಮುಂದಿನ ಜನಾಂಗಕ್ಕೆ ಈ ಎಲ್ಲಾ ಸೌಲಭ್ಯಗಳು ಸಿಗಲು ಸಾಧ್ಯ ಎಂದÀರು.
ತಾಲುಕಾ ಪಂಚಾಯತದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ ನಾಯ್ಕ ಉಪಸ್ಥಿತರಿದ್ದು ಶುಭ ಹಾರೈಸಿದರು.
ವೇದಿಕೆಯಲ್ಲಿ ತಾಲೂಕಾ ಪಂಚಾಯತದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕರಾದ ಕೃಷ್ಣಾನಂದ ಕೆ. ರವರು ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಉಪನಿರ್ದೇಶಕರಾದ ಶಾಂತಿ, ಸಂಪನ್ಮೂಲ ವ್ಯಕ್ತಿಗಳಾದ ಗಣಪತಿ ಜಿ. ಹೆಗಡೆ, ಶಶಿಕಾಂತ ಕುಲಕರ್ಣಿ, ಮುಗ್ವಾ ಗ್ರಾಮ ಪಂಚಾಯತದ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸುಜಾತ ನಾಯ್ಕ ರವರ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಆರಂಭಗೊಂಡಿತ್ತು. ಪಂಚಾಯತ ಅಭಿವೃದ್ಧಿ ಅಧಿಕಾರಿ ಕುಮಾರಿ ಕವಿತಾ ರವರು ಸರ್ವರನ್ನು ಸ್ವಾಗತಿಸಿದರು. ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಕೊನೆಯಲ್ಲಿ ಎನ್.ಆರ್.ಎಲ್.ಎಮ್. ಮೇಲ್ವಿಚಾರಕರಾದ ಬಾಲಚಂದ್ರ ನಾಯ್ಕ ವಂದಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಸುಮಾರು 200ಕ್ಕಿಂತಲೂ ಹೆಚ್ಚು ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ, ಚುನಾಯಿತ ಗ್ರಾಮ ಪಂಚಾಯತ ಪ್ರತಿನಿಧಿಗಳಿಗೆ ತರಬೇತಿಯನ್ನು ನೀಡಲಾಯಿತು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: ಅಭಿವೃದ್ಧಿ ಸಂಸ್ಥೆ, ಇಂಧÀನ ಮೂಲಗಳ ಸಂರಕ್ಷಣೆ, ಜೈವಿಕ ಇಂಧನ, ತಾ.ಪಂ.ಅಧ್ಯಕ್ಷ ಉಲ್ಲಾಸ ನಾಯ್ಕ, ನಮ್ಮೆಲ್ಲರ ಕರ್ತವ್ಯವಾಗಬೇಕು, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ, ಮುಗ್ವಾ, ಹೆಚ್ಚೆಚ್ಚು ಸೌರಶಕ್ತಿ, ಹೊನ್ನಾವರದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar