ಹೊನ್ನಾವರ .ಇಂಧÀನ ಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಹೆಚ್ಚೆಚ್ಚು ಸೌರಶಕ್ತಿ, ಜೈವಿಕ ಇಂಧನ ಬಳಸುವಂತಹ ಪದ್ದತಿಯನ್ನು ರೂಡಿಸಿಕೊಳ್ಳಬೇಕು. ಮುಂದಿನ ತಲೆಮಾರಿಗೆ ಇವೆಲ್ಲವುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯಬೇಕು ಅಂತಾದರೆ ಅದರ ಬಗ್ಗೆ ಜಾಗ್ರತಿಯನ್ನು ಹೊಂದಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕಾ ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ರವರು ನುಡಿದರು.
ಅವರು ಗ್ರಾಮ ಪಂಚಾಯತ ಮುಗ್ವಾ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಇವರ ಆಶ್ರಯದಲ್ಲಿ ಶ್ರೀ ರಾಘವೇಶ್ವರ ಭಾರತಿ ಸವೇದ ಸಂಸ್ಕøತ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮುಗ್ವಾದಲ್ಲಿ ಆಯೋಜಿಸಿರುವ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹಾಗೂ ಗ್ರಾಮ ಪಂಚಾಯತ ಪ್ರತಿನಿಧಿಗಳಿಗೆ ಆಯೋಜಿಸಿದ ಜೈವಿಕ ಇಂಧನದ ಸದ್ಬಳಕೆಯ ಕುರಿತು ನಡೆದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.
ಉದ್ಘಾಟನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಗ್ವಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ ಮಾತನಾಡಿ ನಮ್ಮ ಪಂಚಾಯತದಲ್ಲಿ ಈ ಕಾರ್ಯಗಾರ ಆಯೋಜಿಸಿರುವುದಕ್ಕೆ ಸಂತೋಷವಾಗುತ್ತದೆ. ಇಲ್ಲಿ ನಮ್ಮ ವ್ಯಾಪ್ತಿಗೆ ಒಳಪಡುವ ಅನೇಕ ಸ್ವಸಹಾಯ ಗುಂಪುಗಳು ಆಗಮಿಸಿದೆ. ನೀವೆಲ್ಲ ಈ ತರಬೇತಿಯ ಪ್ರಯೋಜನವನ್ನು ಪಡೆಯಿರಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸ್ಥಳೀಯ ಜಿಲ್ಲಾ ಪಂಚಾಯತ ಸದಸ್ಯರಾದ ಶ್ರೀಕಲಾ ಎಸ್. ಶಾಸ್ತ್ರಿ ಮಾತನಾಡಿ ಇದೊಂದು ಉತ್ತಮವಾದ ತರಬೇತಿ ಕಾರ್ಯಕ್ರಮ. ಬಹುತೇಕ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದೀರಿ. ಓರ್ವ ಮಹಿಳೆ ಈ ಕಾರ್ಯಗಾರದ ಉದ್ದೇಶವನ್ನು ಅರಿತುಕೊಂಡರೆ ಒಂದು ಕುಟುಂಬ ಅರಿತುಕೊಂಡಂತೆಯೇ ಸರಿ. ಏಕೆಂದರೆ ಈಗ ಮಹಿಳಾ ಪ್ರಧಾನ ಕುಟುಂಬವಾಗಿರುವುದರಿಂದ ಈ ತರಬೇತಿ ಯಸಶ್ವಿಯಾಗುತ್ತದೆ. ಎಂದು ಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿಗಳು ಹೊನ್ನಾವರದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ ನಮ್ಮ ಸುತ್ತಲಿನ ಪರಿಸರವನ್ನು ರಕ್ಷಣೆ ಮಾಡುವುದರ ಜೊತೆಗೆ ನೀರಿನ ಸಂರಕ್ಷಣೆ, ಮಣ್ಣಿನ ಸಂರಕ್ಷಣೆ, ಶುದ್ಧ ಗಾಳಿಯ ಸಂರಕ್ಷಣೆ ಮಾಡಿದಾಗ ಮಾತ್ರ ಮುಂದಿನ ಜನಾಂಗಕ್ಕೆ ಈ ಎಲ್ಲಾ ಸೌಲಭ್ಯಗಳು ಸಿಗಲು ಸಾಧ್ಯ ಎಂದÀರು.
ತಾಲುಕಾ ಪಂಚಾಯತದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ ನಾಯ್ಕ ಉಪಸ್ಥಿತರಿದ್ದು ಶುಭ ಹಾರೈಸಿದರು.
ವೇದಿಕೆಯಲ್ಲಿ ತಾಲೂಕಾ ಪಂಚಾಯತದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕರಾದ ಕೃಷ್ಣಾನಂದ ಕೆ. ರವರು ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯ ಉಪನಿರ್ದೇಶಕರಾದ ಶಾಂತಿ, ಸಂಪನ್ಮೂಲ ವ್ಯಕ್ತಿಗಳಾದ ಗಣಪತಿ ಜಿ. ಹೆಗಡೆ, ಶಶಿಕಾಂತ ಕುಲಕರ್ಣಿ, ಮುಗ್ವಾ ಗ್ರಾಮ ಪಂಚಾಯತದ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸುಜಾತ ನಾಯ್ಕ ರವರ ಪ್ರಾರ್ಥನಾ ಗೀತೆಯೊಂದಿಗೆ ಸಭೆ ಆರಂಭಗೊಂಡಿತ್ತು. ಪಂಚಾಯತ ಅಭಿವೃದ್ಧಿ ಅಧಿಕಾರಿ ಕುಮಾರಿ ಕವಿತಾ ರವರು ಸರ್ವರನ್ನು ಸ್ವಾಗತಿಸಿದರು. ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಕೊನೆಯಲ್ಲಿ ಎನ್.ಆರ್.ಎಲ್.ಎಮ್. ಮೇಲ್ವಿಚಾರಕರಾದ ಬಾಲಚಂದ್ರ ನಾಯ್ಕ ವಂದಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಸುಮಾರು 200ಕ್ಕಿಂತಲೂ ಹೆಚ್ಚು ಸ್ವಸಹಾಯ ಸಂಘಗಳ ಸದಸ್ಯರುಗಳಿಗೆ, ಚುನಾಯಿತ ಗ್ರಾಮ ಪಂಚಾಯತ ಪ್ರತಿನಿಧಿಗಳಿಗೆ ತರಬೇತಿಯನ್ನು ನೀಡಲಾಯಿತು.
Leave a Comment