ಹಳಿಯಾಳ: ಉತ್ತಮ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳಿಗೆ ಗೌರವ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾಡಳಿತ ನೀಡುವ ಸವೋತ್ತಮ ಪ್ರಶಸ್ತಿಗೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭಾಜನರಾಗಿದ್ದಾರೆ.
ಕಳೆದ ನಾಲ್ಕೂವರೆ ವರ್ಷಗಳಿಂದ ಹಳಿಯಾಳದಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗುಳಗುಳೆಯವರು ಇತ್ತೀಚೆಗೆ ಬೈಲಹೊಂಗಲಕ್ಕೆ ವರ್ಗಾವಣೆ ಹೊಂದಿದ್ದರು ಆದರೇ ಅವರ ಉತ್ತಮ ಕಾರ್ಯವನ್ನು ಮನಗೊಂಡು ಮತ್ತೇ ಹಳಿಯಾಳಕ್ಕೆ ಅವರನ್ನು ಮರುವರ್ಗಾವಣೆ ಮಾಡಿಕೊಳ್ಳಲಾಗಿತ್ತು.
ಅಧಿಕಾರಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದ ಸಮೀತಿ ರಚಿಸಿ ಆಯಾ ಜಿಲ್ಲೆಯಲ್ಲಿ ಉತ್ತಮ ಆಡಳಿತ, ಕೆಲಸ ನಿರ್ವಹಿಸುವ ಅಧಿಕಾರಿಗಳನ್ನು ಆಯ್ಕೆ ಮಾಡಿ ಈ ಸವೋತ್ತಮ ಪ್ರಶಸ್ತಿಯನ್ನು ನೀಡಲಾಗುತ್ತದೆ. ವಿದ್ಯಾಧರ ಗುಳಗುಳಿ ಅವರು ಸವೋತ್ತಮ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಉ.ಕ. ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಅವರು ಪ್ರಕಟಿಸಿದ್ದು. ಜ 26 ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.
Leave a Comment