• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ. ಪಂ. ಚುನಾವಣೆ ಪೂರ್ವಭಾವಿ ಸಭೆ,ಅಪಪ್ರಚಾರಕ್ಕೆ ದಿಟ್ಟ ಉತ್ತರ ನೀಡಿ ಭೀಮಣ್ಣ ನಾಯ್ಕ ಕರೆ

January 28, 2019 by Gaju Gokarna Leave a Comment

watermarked hnr 28 CONGRESS.

ಹೊನ್ನಾವರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗದ ಕೇಂದ್ರದ ಮೋದಿ ನೇತೃತ್ವದ ಬಿ.ಜೆ.ಪಿ ಸರಕಾರ, ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೇಸ್ ಪಕ್ಷದ ಮೇಲೆ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದು ಕಾಂಗ್ರೇಸ್ ಕಾರ್ಯಕರ್ತರು ದಿಟ್ಟ ಉತ್ತರ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕರೆ ನೀಡಿದರು.
ಅವರು ಮುಂಬರುವ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾ ಪ್ರಯುಕ್ತ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಮೋದಿ ಸರಕಾರದ ಸುಳ್ಳು ಭರವಸೆಗಳಿಂದ ಜನತೆ ಕಂಗಾಲಾಗಿದ್ದು ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿ.ಜೆ.ಪಿ ಸರಕಾರಕ್ಕೆ ಹೀನಾಯ ಸೋಲಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಕಾಂಗ್ರೇಸ್ ಸರಕಾರ ರಚನೆಯಾಗುವುದು ಖಚಿತ ಎಂದರು. ಸುಳ್ಳು ಹೇಳುವುದೇ ಬಿ.ಜೆ.ಪಿಯ ಕೆಲಸವಾಗಿದ್ದು ಪಟ್ಟಣ ಪಂಚಾಯತ ಚುನಾವಣಾ ಸಂದರ್ಭದಲ್ಲಿ ಇವುಗಳನ್ನೆಲ್ಲಾ ಮತದಾರರ ಗಮನಕ್ಕೆ ತಂದು ಉತ್ತಮ ಆಡಳಿತ ಕಾಂಗ್ರೇಸ್ ಪಕ್ಷದಿಂದ ಸಾಧ್ಯ ಅನ್ನುವುದನ್ನು ಜನತೆಗೆ ಮನವರಿಕೆ ಮಾಡುವಂತೆ ಭೀಮಣ್ಣ ಮನವಿ ಮಾಡಿದರು.
ಮಾಜಿ ಶಾಸಕಿ ಶಾರದಾ ಶೆಟ್ಟಿ ಮಾತನಾಡಿ, ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಉತ್ತಮವಾಗಿ, ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿ, ಎಲ್ಲರನ್ನೂ ಒಗ್ಗೂಡಿಸಿ ಪಟ್ಟಣ ಪಂಚಾಯತ ಚುನಾವಣೆ ಎದುರಿಸಿದರೆ ಕಾಂಗ್ರೇಸ್ ಪಕ್ಷ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪುನಃ ಅಧಿಕಾರಕ್ಕೆ ಬರುವಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನ ತಂದು ಅಭಿವೃದ್ಧಿ ನಡೆಸಿದರೂ, ವಿರೋಧ ಪಕ್ಷಗಳ ಕೀಳು ಅಪಪ್ರಚಾರಕ್ಕೆ ಜನ ತಲೆಬಾಗಿದರು ಎಂದು ಬೇಸರ ವ್ಯಕ್ತಪಡಿಸಿದರು. ಮುಂಬರುವ ಪಟ್ಟಣ ಪಂಚಾಯತ ಚುನಾವಣೆಯಲ್ಲಿಯೂ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗುವುದರಲ್ಲಿ ಯಾವುದೇ ಅನುಮಾನವಿಲ್ಲದ ಕಾರಣ ಕಾರ್ಯಕರ್ತರು ಈ ಕುರಿತಂತೆ ಎಚ್ಚರದಿಂದಿರಲೂ ಶಾರದಾ ಶೆಟ್ಟಿ ಕರೆ ನೀಡಿದರು.
ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಎನ್ ಸುಬ್ರಹ್ಮಣ್ಯ ಮಾತನಾಡಿ ಪಟ್ಟಣದಲ್ಲಿ ಈ ಬಾರಿ ಕಾಂಗ್ರೇಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ ಎಂದರು ಆದರೂ ಕಾರ್ಯಕರ್ತರು, ಪಕ್ಷದ ಮುಖಂಡರು ಚುನಾವಣೆಯನ್ನು ಲಘುವಾಗಿ ಪರಿಗಣ ಸದೆ ಗಂಭೀರವಾಗಿ ಎದುರಿಸಿ ಗೆಲುವಿನ ಗುರಿ ತಲುಪುವಂತೆ ನೆರೆದ ಕಾರ್ಯಕರ್ತರಿಗೆ ಹುರಿದುಂಬಿಸಿದರು. ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ 3 ತಿಂಗಳಿನಿಂದ ಪಟ್ಟಣ ಪಂಚಾಯತ ಚುನಾವಣೆ ಕುರಿತು ನಾವು ಗಂಭೀರವಾಗಿ ಅವಲೋಕಿಸುತ್ತಿದ್ದು ಎಲ್ಲಾ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ವಾರ್ಡ ಸಮಿತಿಗಳನ್ನು ರಚಿಸಿದ್ದೇವೆ. ಕಾರ್ಯಕರ್ತರು, ಮುಖಂಡರ ನಡುವೆ ಇರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ನಿವಾರಿಸಿದ್ದೇವೆ. ಪಕ್ಷದ ವರಿಷ್ಠ ಮಂಡಳಿಯ ತೀರ್ಮಾನದಂತೆ ಸ್ಥಳೀಯ ವಾರ್ಡ ಮಟ್ಟದಲ್ಲಿ ಸರ್ವಾನುಮತದ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಗೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ವೀಕ್ಷಕರಾಗಿ ಆಗಮಿಸಿದ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಶಂಭು ಶೆಟ್ಟಿ, ಕಾರ್ಯದರ್ಶಿ ನಾಗೇಶ ನಾಯ್ಕ ಮಾತನಾಡಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಚುನಾವಣೆ ಎದುರಿಸುವಂತೆ ಕರೆ ನೀಡಿದರು.
ಪಟ್ಟಣ ಪಂಚಾಯತ ಅಧ್ಯಕ್ಷೆ ಶ್ರೀಮತಿ ರಾಜಶ್ರೀ ಬಾಲಚಂದ್ರ ನಾಯ್ಕ, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ ಉಪಸ್ಥಿತರಿದ್ದರು. ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಲಂಬೋಧರ ನಾಯ್ಕ ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: bhimanna nayaka call, last Lok Sabha election, organizational and panchayat polls, the BJP-led BJP government in the center, the Congress party with hundreds of years history. P. Preliminary meetings, the Honnavar Block Congress city, The legislator Sharada Shetty said that the Honnavar Block Congress is well organized, the New English School Conference

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...