ಹೊನ್ನಾವರ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಹೊನ್ನಾವರ ರೆಡ್ ಕ್ರಾಸ್ ಸಂಸ್ಥೆಯವರು ತಾಲೂಕು ಆಡಳಿತ, ತಾಲೂಕಾ ಪಂಚಾಯತ ಹಾಗೂ ಪಟ್ಟಣ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ಇಲ್ಲಿಯ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ ಮಾವಿನಕುರ್ವಾದ ಆಟೋ ಚಾಲಕ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಸನ್ಮಾನಿಸಲಾಯಿತು.
ಕಳೆದ 25 ವರ್ಷಗಳಿಂದ ಒಂದೂ ಅಪಘಾತ ಮಾಡದೇ ಆಟೋ ಚಲಾಯಿಸುತ್ತಿರುವ ಎಲಿಯಾಸ್ ಬಸ್ತಾಂವ್ ರೊಡ್ರಗಿಸ್ ಅವರನ್ನು ಗುರುತಿಸಿ ಈ ಸಲದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ತಹಸೀಲ್ದಾರ ವಿ.ಆರ್.ಗೌಡ ಅವರು ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ, ಪಟ್ಟಣ ಪಂಚಾಯತ ಅಧ್ಯಕ್ಷೆ ರಾಜಶ್ರೀ ಬಾಲಚಂದ್ರ ನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಉಷಾ ಹಾಸ್ಯಗಾರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಮುಖಂಡರಾದ ಜಗದೀಪ ತೆಂಗೇರಿ, ಯೋಗೀಶ ರಾಯ್ಕರ್ ಮುಂತಾದವರು ಉಪಸ್ಥಿತರಿದ್ದರು.
Leave a Comment