ಹೊನ್ನಾವರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕ ಯುವಕ ಸಂಘಗಳ ಒಕ್ಕೂಟ ಇವರು ನೀಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ತಾಲೂಕಿನ ಮೂಡ್ಕಣಿಯ ವಿನಾಯಕ ಬಿ ನಾಯ್ಕ ಆಯ್ಕೆಯಾಗಿದ್ದಾರೆ.
ಉತ್ತರಕನ್ನಡ ಜಿಲ್ಲಾ ಯುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹೊನ್ನಾವರ ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಡ್ಕಣಿಯ ಶ್ರೀ ಶಂಭುಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಸಂಘಟಿಸುತ್ತ ಜನಪ್ರಿಯಗಳಿಸಿರುವ ಇವರು ಈಗಲೂ ಕೂಡ ಇಂತಹ ಕಾರ್ಯಗಳನ್ನು ಮುಂದುವರಿಸಿದ್ದಾರೆ.
2012-13 ನೇ ಸಾಲಿನಲ್ಲಿ ಜಿಲ್ಲಾ ಯುವ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 31 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆಯಲಿರುವ ರಾಜ್ಯ ಯುವ ಸಮ್ಮೇಳನದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
Leave a Comment