• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇಶಪಾಂಡೆ ಮೇಲಿನ ಆರೋಪಕ್ಕೆ ಖಂಡನೆ ದೇಶ ಕಂಡ ಹೀನ ರಾಜಕಾರಣ ಅನಂತಕುಮಾರ ;ಜಗದೀಪ ತೆಂಗೇರಿ

January 31, 2019 by Gaju Gokarna Leave a Comment

watermarked 31 hnr PressMeet31 01 2019.

ಹೊನ್ನಾವರ : ಕಳೆದ ಐದು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸ್ವಚ್ಛ, ಪರಿಶುದ್ಧ ಆಡಳಿತ ನೀಡಿ ನಾಡಿನ ಜನತೆಯ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾದ ಸಚಿವ ಆರ್.ವಿ. ದೇಶಪಾಂಡೆ ವಿರುದ್ಧ “ಪರ್ಸಂಟೆಜ್ ದೇಶಪಾಂಡೆ” ಅನ್ನುವ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ್ರ ಸಚಿವ ಅನಂತಕುಮಾರ ಹೇಳಿಕೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಖಂಡಿಸಿದ್ದಾರೆ.

ಅವರು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಐದು ಬಾರಿ ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರೂ ದೇಶದ ಸಂವಿಧಾನ, ಕಾನೂನಿಗೆ ಗೌರವ ನೀಡದೇ ಚಾಕು, ಚೂರಿ ಸಂಸ್ಕøತಿ ಮೈಗೂಡಿಸಿಕೊಂಡಿರುವ ಅನಂತಕುಮಾರ ಹೆಗಡೆ ದೇಶಕಂಡ ಹೀನ ರಾಜಕಾರಣ ಎಂದು ತಿವಿದಿದ್ದಾರೆ. ಕೇಂದ್ರದ ಬಿ.ಜೆ.ಪಿ. ಸರಕಾರದಲ್ಲಿ ಅತ್ಯಂತ ಜವಾಬ್ಧಾರಿ ಸ್ಥಾನದಲ್ಲಿದ್ದರೂ, ಕ್ಷೇತ್ರಕ್ಕೆ ನಯಾಪೈಸೆ ಕೊಡುಗೆ ನೀಡದ ಅವರು ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಜನರ ಗಮನ ಬೇರೆಡೆಗೆ ಸೆಳೆಯಲು ವಿನಾಕಾರಣ ಆರ್.ವಿ. ದೇಶಪಾಂಡೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಯಾರೂ ಕೂಡಾ ಭೂಮಿ ಮೇಲೆ ಅರ್ಜಿ ಹಾಕಿ ಹುಟ್ಟಿ ಬಂದಿಲ್ಲಾ. ನಮ್ಮ ನಾಯಕ ರಾಹುಲ್ ಗಾಂಧಿಯವರ ಹುಟ್ಟಿನ ಬಗ್ಗೆ ಶಂಕೆ ವ್ಯಕ್ತಪಡಿಸುವ ಅನಂತಕುಮಾರ, ತನ್ನ ಹುಟ್ಟಿನ ಬಗ್ಗೆ ಸ್ಪಷ್ಟನೆ ನೀಡಲಿ. ಅಪ್ಪ ಮುಸ್ಲಿಂ, ತಾಯಿ ಕ್ರಿಶ್ಚಿಯನ್, ರಾಹುಲ್ ಹೇಗೆ ಬ್ರಾಹ್ಮಣರಾಗುತ್ತಾರೆ ಅನ್ನುವ ಅನಂತಕುಮಾರ ಹೇಳಿಕೆ ಅವರ ಮನಸ್ಥಿತಿಗೆ ಹಿಡಿದ ಕೈಗನ್ನಡಿ ಎಂದರು.

ಹೊನ್ನಾವರದಲ್ಲಿ ಪರೇಶ ಮೇಸ್ತನ ಸಾವಿನ ಸಂದರ್ಭದಲ್ಲಿ ಜನರ ನಡುವೆ ಪ್ರಚೋದನಾಕಾರಿ ಭಾಷಣ ಮಾಡಿ ಒಂದು ವಾರದಲ್ಲಿ ಹನಿ-ಹನಿ ರಕ್ತಕ್ಕೂ ನ್ಯಾಯ ನೀಡುತ್ತೇನೆ ಎಂದು ಜನರ ಮುಂದೆ ಆಣೆ ಮಾಡಿ ಈಗ ಒಂದೂವರೆ ವರ್ಷವಾದರೂ ಪರೇಶ ಮೇಸ್ತನ ಕುಟುಂಬಕ್ಕೆ ಕಣ್ಣೊರಿಸುವ ಪ್ರಯತ್ನ ಮಾಡುತ್ತಿಲ್ಲ. ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೇಸ್ ನಾಯಕರುಗಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದನ್ನು ಇನ್ನಾದರೂ ನಿಲ್ಲಿಸಲಿ. ಇಲ್ಲದಿದ್ದರೆ ಕಾಂಗ್ರೇಸ್ ಕಾರ್ಯಕರ್ತರು ನಿಮ್ಮನ್ನು ಪ್ರತಿಭಟಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದರು.

ಮುಂದುವರಿದು ಮಾತನಾಡಿದ ತೆಂಗೇರಿ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಇಂದಿನ ಶಾಸಕ ದಿನಕರ ಶೆಟ್ಟಿ ಬೇರೆಯವರ ಸಾಧನೆಯನ್ನು ತನ್ನದು ಎಂದು ಬಿಂಬಿಸಿಕೊಳ್ಳುತ್ತಿರುವುದು ಯಾವ ಮಹಾಸಾಧನೇ ಎಂದರು. ಹೊನ್ನಾವರ ಶರಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅಂದಿನ ಶಾಸಕಿ ಶ್ರೀಮತಿ ಶಾರದಾ ಮೋಹನ ಶೆಟ್ಟಿಯವರ ಸರ್ವಪ್ರಯತ್ನದಿಂದಾಗಿದ್ದು ಅನ್ನುವುದು ಎಲ್ಲರಿಗೂ ತಿಳಿದ ವಿಷಯ. 122 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ದಿನಾಂಕ : 06-12-2017 ರಂದು ಹಣಕಾಸು ಮಂಜೂರಾತಿಯೊಂದಿಗೆ ಕುಮಟಾದಲ್ಲಿ ಶಂಕು ಸ್ಥಾಪನೆ ನೆರವೇರಿಸದ್ದರು. ಬಹುದೊಡ್ಡ ಯೋಜನೆಗಳಲ್ಲಿ ಸಣ್ಣ ಪುಟ್ಟ ತಾಂತ್ರಿಕ ತೊಂದರೆಗಳಿರುವುದು ಸಹಜ. ಅದನ್ನೇ ಅರಣ್ಯ ಇಲಾಖೆಯಿಂದ ನೀಲನಕ್ಷೆಗೆ ಅನುಮತಿ ಅನ್ನುವ ಪ್ರತಿಯನ್ನು ಪತ್ರಿಕೆಗಳಿಗೆ ಪ್ರದರ್ಶಿಸಿ ಗ್ರಾಮೀಣಾಭಿವೃದ್ಧಿ ಸಚೀವರ ಕೃಷ್ಣ ಬೈರೆಗೌಡರಿಂದ 56 ಕೋಟಿ ಪ್ರಸ್ತಾವನೆ ಸಲ್ಲಿಕೆ ಇವುಗಳೆಲ್ಲಾ ನಿರಂತರ ಪ್ರಕ್ರಿಯೆಯಾಗಿದ್ದು, ಇದೊಂದು ಅಗ್ಗದ ಪ್ರಚಾರ ತಂತ್ರದ ಭಾಗವಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಎನ್. ಸುಬ್ರಹ್ಮಣ್ಯ, ಪ.ಪಂಚಾಯತ ಅಧ್ಯಕ್ಷೆ ರಾಜಶ್ರೀ ನಾಯ್ಕ, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ದಾಮೋದರ ನಾಯ್ಕ, ಪ.ಪಂ. ಮಾಜಿ ಅಧ್ಯಕ್ಷ ರವೀಂದ್ರ ನಾಯ್ಕ, ಕಾಂಗ್ರೇಸ್ ಇಂಟಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಕಾಂಗ್ರೇಸ್ ಮುಖಂಡರಾದ ಮುಸಾ ಅಣ ್ಣಗೇರಿ, ನೆಲ್ಸನ್ ರೊಡ್ರಿಗೀಸ್, ಉಮಾ ಮೇಸ್ತ, ಕುಪ್ಪು ಗೌಡ, ರಾಜೇಶ ಗುನಗಾ, ಮೋಹನ ಮೇಸ್ತ, ಕೃಷ್ಣಾ ಹರಿಜನ, ಲಂಬೋದರ ನಾಯ್ಕ, ತಿಮ್ಮಪ್ಪ ನಾಯ್ಕ, ಅಣ್ಣಪ್ಪ ಆಚಾರಿ, ಹರೀಶ ನಾಯ್ಕ, ಮಂಜುನಾಥ ಶಾನಭಾಗ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: and one week, condemnation of Deshpande, condemnation of the country's worst politics Ananthakumar, Dad, derogatory speech, expressing grave concerns about our leader, has given a clean and pervasive administration in state politics for the past five decades, how Brahmin and land were born. Minister of State for Human Resource Development, I give justice to the blood of Honey-Honey, Jagadipa Tengere, Mother Christian, muslim, Patel Deshpande, Rahul, Rahul Gandhi's birth. Deshpande, RV Ravichandran, The case of death mastana's death, the hype of speech among people, who has been in love with the people of the country

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...