ಹಳಿಯಾಳ: – ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು.
ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ ಉದ್ಘಾಟಿಸಿ ಮಾತನಾಡಿ ಸಿ.ಎನ್ಸಿ ಮತ್ತು ಐ.ಸಿ ಎಂಜಿನ್ ತಂತ್ರಜ್ಞಾನದ ಉಪಯುಕ್ತತೆಯನ್ನು ವಿವರಿಸಿದರು ಹಾಗೂ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಯಲ್ಲಿ ಇಂಥಹ ತರಬೇತಿಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕೆಂದು ಕರೆ ನೀಡಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿಯವರು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿ ಆಧುನಿಕ ತಂತ್ರಜ್ಞಾನಗಳಾದ ಕ್ಯಾಟಿಯಾ ಮತ್ತು ಎನ್ಸಿಸ್ ಕುರಿತಾಗಿ ಅಲ್ಪಾವಧಿಯ ತರಬೇತಿ ಕಾರ್ಯಕ್ರಮಗಳನ್ನು ಮುಂಬರುವ ದಿನಗಳಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗುವದೆಂದರು. ಪ್ರೊ.ಗುರುನಾಥ ಎಮ್ ಮತ್ತು ಪ್ರೊ. ಶಂಕರ ಬಡಿಗೇರ್ ತರಬೇತಿ ಕಾರ್ಯಗಾರ ನಡೆಸಿಕೊಟ್ಟರು.
Leave a Comment