ಹಳಿಯಾಳ:- ಜಗತ್ತಿಗೆ ನಾಯಕರಾಗಿರುವ ಅಪ್ರತಿಮ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಗಳು ಎಲ್ಲರು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದರೇ ದೇಶದ ಸರ್ವತೋಮುಖ ಅಭಿವೃದ್ದಿ ಸಾಧ್ಯವಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.
ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ನ ಘಟಕದಿಂದ ನಡೆದ ಶಿವಾಜಿ ಮಹಾರಾಜರ 392ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಹಾಗೂ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು.
ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ನ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ, ಶೀವಾಜಿ ನರಸಾನಿ, ಬಿಜೆಪಿಯ ಅನಿಲ ಮುತ್ನಾಳ, ಚಂದ್ರು ಕಮ್ಮಾರ, ಸಂತೋಷ ಘಟಕಾಂಬಳೆ, ವಿಜಯ ಬೋಬಾಟಿ, ರಾಜು ಮೊದಲಾದವರು ಇದ್ದರು.
Leave a Comment