• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೀವನದಲ್ಲಿ ಸರಳತೆ ಅಳವಡಿಸಿಕೊಳ್ಳಿ -ಉಪ ಕುಲಪತಿ ಡಾ.ಕರಿಸಿದ್ದಪ್ಪನವರ ಕರೆ. ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

February 22, 2019 by Yogaraj SK Leave a Comment

KLS engineering collage national level workshop inauguration

ಹಳಿಯಾಳ:- ಜೀವನದಲ್ಲಿ ಸರಳತೆಯನ್ನು ಹೊಂದುವುದರಿಂದ ಉತ್ತಮ ಆಡಳಿತಗಾರನಾಗಬಹುದು ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಸರಳತೆಯನ್ನು ರೂಢಿಸಿಕೊಳ್ಳುಬೇಕೆಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕರಿಸಿದ್ದಪ್ಪನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ ಸಿವಿಲ್ ಇಂಜನಿಯರಿಂಗ್ ಕ್ಷೇತ್ರದಲ್ಲಿ ಯೋಜನಾ ಕಾರ್ಯದ ನಿರ್ವಹಣೆಯ ಪಾತ್ರ ಎಂಬ ವಿಷಯದ ಮೇಲೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾದ 2 ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉಧ್ಘಾಟಿಸಿ ಅವರು ಮಾತನಾಡಿದರು. ಸಿವಿಲ್ ಇಂಜನಿಯರಿಂಗ್ ವಿದ್ಯಾರ್ಥಿಗಳು ಹೊಸ ನಿರ್ಮಾಣ ವಿಧಾನಗಳನ್ನು ಕಲಿತುಕೊಳ್ಳುವುದರ ಮೂಲಕ ಉತ್ತಮ ಭವಿಷ್ಯವನ್ನು ಹೊಂದಬಹುದು ಎಂದರು.
ಹುಬ್ಬಳ್ಳಿ ಸ್ಮಾರ್ಟ ಸಿಟಿ ಯೋಜನೆಯ ಮುಖ್ಯ ಎಂಜಿನಿಯರ್ ಎಮ್ ನಾರಾಯಣ ಮಾತನಾಡಿ ಸಿವಿಲ್ ಇಂಜನಿಯರಿಂಗ್ ಯೋಜನಾ ಕಾರ್ಯದ ಮಹತ್ವವನ್ನು ವಿವರಿಸಿದರು. ಯಾವುದೇ ಯೋಜನೆಗೆ ಮಾನವ ಸಂಪನ್ಮೂಲ, ಕಚ್ಚಾ ವಸ್ತುಗಳು, ಯಂತ್ರಗಳು ಮತ್ತು ಬಂಡವಾಳವನ್ನು ಸರಿಯಾದ ರೀತಿಯಲ್ಲಿ ಆಯೋಜಿಸಿ ಬಳಸಿಕೊಂಡರೆ ಮಾತ್ರ ಯೋಜನಾ ಕಾರ್ಯವು ಯಶಸ್ಸನ್ನು ಕಾಣಲು ಸಾಧ್ಯವಿದ್ದು ಆ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಉಪಯುಕ್ತವಾಗಬಲ್ಲದು ಎಂದು ಅಭಿಪ್ರಾಯಿಸಿದರು.
ಧಾರವಾಡದ ಇನ್‍ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ಸಂಸ್ಥೆಯ ಕಾರ್ಯದರ್ಶಿ ವಿಜಯ ಎಚ್ ತೋಟಿಗೇರ್, ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಿ.ಎಮ್ ದೇಶಪಾಂಡೆ ಪ್ರಾಸ್ತಾವಿಕವಾಗಿ ಮಾತನಾಡಿ ಇಂಥಹ ಕಾರ್ಯಾಗಾರಗಳಿಂದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಉತ್ತಮ ಭವಿಷ್ಯವನ್ನು ಹೊಂದಬಹುದೆಂದರು.
ಕಾರ್ಯಕ್ರಮದ ಉದ್ಘಾಟನೆಯ ಬಳಿಕ ಸಿವಿಲ್ ಇಂಜನಿಯರಿಂಗ್ ಯೋಜನಾ ಕಾರ್ಯದ ಕುರಿತಾಗಿ ಹಲವಾರು ಉಪನ್ಯಾಸ ಕಾರ್ಯಕ್ರಗಳು ಮತ್ತು ಪ್ರೈಮ್‍ವೇರಾ ಹಾಗೂ ಎಮ್.ಎಸ್.ಪಿ ಸಾಫ್ಟವೇರ್‍ಗಳ ಪ್ರಾಯೋಗಿಕ ತರಬೇತಿಗಳು ಪ್ರಾರಂಭಗೊಂಡವು.
ಧಾರವಾಡದ ಅಮ್ಮಿನಭಾವಿ ಮತ್ತು ಹೆಗಡೆ ಕನ್‍ಷ್ಟ್ರಕ್ಟನ್ ಲಿಮಿಟೆಡ್‍ನ ನಿರ್ದೇಶಕ ಸಂಜಯ ಅಮ್ಮಿನಭಾವಿ ಮತ್ತು ಬೆಳಗಾವಿಯ ಜಿ.ಎಸ್.ಕೆ ಟ್ರೈನಿಂಗ್‍ನ ಡಿಸೈನ್ ಇಂಜನಿಯರ್ ಮಂಜುನಾಥ ಐನಾಪುರೆ ತರಬೇತಿಯನ್ನು ನೀಡಿದರು. 2 ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯದ ವಿವಿಧ ಇಂಜನಿಯರಿಗ್ ಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ ಎಂದು ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ಮಾಹಿತಿ ನೀಡಿದರು.

watermarked 21 hly 2

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: adopt simplicity in life, call Vice Chancellor Dr. Eridappa, Civil Engineering field, drive to national level seminar, hubbaḷḷi smārṭa siṭi yōjane, Hubli Smart City Project, kaccā vastugaḷu, KLS engineering collage national level workshop inauguration, Mānava sampanmūla, sivil in̄janiyariṅg kṣētra, upakulapati ḍā. Karisiddappanavara vidyārthigaḷige, Vice Chancellor Dr. Call the students of Karissippappa, Visvesvaraya Technological University, viśvēśvarayya tāntrika viśvavidyālaya, yantragaḷu mattu baṇḍavāḷavannu sariyāda rītiyalli āyōjisi baḷa

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...