ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು.
ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಅಂತರÀ ಕಾಲೇಜುಗಳ ಪುರುಷರ ಖೋಖೋ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಎಸ್.ವಿ ಗಣಾಚಾರಿ ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಧಾರವಾಡ, ಹುಬ್ಬಳ್ಳಿ, ನಿಪ್ಪಾಣಿ, ಬೆಳಗಾವಿ, ರಾಣೆಬೆನ್ನೂರ, ಮತ್ತು ಚಿಕ್ಕೋಡಿ ಭಾಗದ ಇಂಜನಿಯರಿಂಗ್ ಕಾಲೇಜುಗಳ ತಂಡಗಳು ಭಾಗವಹಿಸಿವೆ.
ವೇದಿಕೆಯಲ್ಲಿ ವಿ.ತಾ.ವಿ ಬೆಳಗಾವಿ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಎಸ್ ಎಫ್ ಕೊಡ್ಲಿ, ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಗದಿಗೆಪ್ಪಾ ಯಳ್ಳೂರ್ ಇದ್ದರು. ವಿದ್ಯಾರ್ಥಿಗಳಾದ ಅಮೋಘ ಸಿ ಮತ್ತು ಮೊಹಮ್ಮದ್ ಅಕೀಲ್ ಕಾರ್ಯಕ್ರಮ ನಿರ್ವಹಿಸಿದರು.
Leave a Comment