• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭೀಮಣ್ಣ ವಿರುದ್ಧ ಐ.ಟಿ. ಪ್ರಕರಣ ರಾಜಕೀಯ ಪ್ರೇರಿತ ;ಜಗದೀಪ ತೆಂಗೇರಿ

March 10, 2019 by Gaju Gokarna Leave a Comment

Honnavar block Congress Press Meet

ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಭೀಮಣ್ಣ ನಾಯ್ಕ ಮತ್ತು ಮಾಜಿ ಶಾಸಕ ಸತೀಶ ಸೈಲ್ ಮೇಲೆ ಅಕ್ರಮ ಹಣ ಸಾಗಾಟಕ್ಕೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆಯ ದೂರಿನ ಮೇಲೆ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಆಪಾದಿಸಿದ್ದಾರೆ.

ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಕಳೆದ ಮೇ ತಿಂಗಳಿನ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆಗೆ ಹಾಜರು ಪಡಿಸಿದ್ದರೂ, 10 ತಿಂಗಳ ನಂತರ ಲೋಕಸಭಾ ಚುನಾವಣೆಯ ಸನಿಹದಲ್ಲಿ ಉಪವಿಭಾಗಾಧಿಕಾರಿಗಳ ಮೂಲಕ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸುತ್ತಿರುವುದನ್ನು ಅವರು ಖಂಡಿಸಿದ್ದಾರೆ.

watermarked 20190309 164146

ಕೇಂದ್ರದ ಬಿ.ಜೆ.ಪಿ. ಸರಕಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ತಾಳಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದು ಕಾಂಗ್ರೇಸ್ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆಯನ್ನು ಛೂ ಬಿಟ್ಟು ತನ್ನ ಕಾರ್ಯಸಾಧನೆ ಮಾಡುತ್ತಿದೆ ಎಂದು ಆಪಾದಿಸಿದರು.

122 ಕೋಟಿ, 70 ಲಕ್ಷ ರೂಪಾಯಿ ವೆಚ್ಚದ ಶರಾವತಿ ಕುಡಿಯುವ ನೀರು ಯೋಜನೆಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು ಜಗ್ಗಜಾಹೀರವಾಗಿದೆ. ಆದರೂ ಕೂಡ ಇಂದಿನ ಶಾಸಕ ದಿನಕರ ಶೆಟ್ಟಿ ಅದನ್ನು ತಮ್ಮ ಸಾಧನೆಯಂತೆ ಪದೇ ಪದೇ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಈಗಾಗಲೇ ಶರಾವತಿ ಕುಡಿಯುವ ನೀರು ಬಹುಗ್ರಾಮ ಯೋಜನೆಯಡಿ ಕೆಲಸ ಆರಂಭವಾಗಿದ್ದು ಅಂದಿನ ಶಾಸಕಿ ಶಾರಾದಾ ಶೆಟ್ಟಿ, ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಯವರ ಸರ್ವಪ್ರಯತ್ನವೇ ಇದಕ್ಕೆ ಮೂಲಕಾರಣವಾಗಿದೆ. ಈ ಯೋಜನೆಯಿಂದ ಹೊಸಕುಳಿ, ಮುಗ್ವಾ, ಹೊನ್ನಾವರ ಪಟ್ಟಣಕ್ಕೆ ಮುಂದಿನ ದಿನಗಳಲ್ಲಿ ಸಾಕಷ್ಟು ಕುಡಿಯುವ ನೀರು ಹರಿಯುವುದರಲ್ಲಿ ಸಂದೇಹವೇ ಇಲ್ಲಾ. ಆದರೆ ಉಳಿದ ಕರ್ಕಿ, ಹಳದೀಪುರ, ನವಿಲಗೋಣ, ಕಡತೋಕಾ, ಚಂದಾವರ, ಕಡ್ಲೆ, ಸಾಲಕೋಡ ಗ್ರಾಮಗಳಲ್ಲೂ ಸಾಕಷ್ಟು ಕುಡಿಯುವ ನೀರಿನ ಹಾಹಾಕಾರ ಇದ್ದು ಈ ಬಗ್ಗೆ ಶಾಸಕ ದಿನಕರ ಶೆಟ್ಟಿ ಗಮನಹರಿಸುವುದು ಒಳ್ಳೆಯದು ಎಂದು ತೆಂಗೇರಿ ಸಲಹೆ ನೀಡಿದರು.

ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ರಾಜಕೀಯ ದುರುದ್ದೇಶದಿಂದ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಎನ್. ಸುಬ್ರಹ್ಮಣ್ಯ ಮಾತನಾಡಿ ಭೀಮಣ್ಣ ನಾಯ್ಕ ಪ್ರಕರಣಕ್ಕೆ ಸಂಬಂಧಸಿದ ಎಲ್ಲಾ ದಾಖಲೆಗಳನ್ನು ಕಳೆದ ಮೇ ತಿಂಗಳಲ್ಲಿಯೇ ಆದಾಯ ತೆರಿಗೆ ಇಲಾಖೆಗೆ ಹಾರು ಪಡಿಸಿದ್ದರು. ಭೀಮಣ್ಣ ನಾಯ್ಕರನ್ನು ರಾಜಕೀಯವಾಗಿ ಮುಗಿಸಲು ಬಿ.ಜೆ.ಪಿ. ನಾಯಕರು ಕುತಂತ್ರ ನಡೆಸಿದ್ದಾರೆ ಎಂದರು. ಕೇಂದ್ರದ ಬಿ.ಜೆ.ಪಿ. ನೇತೃತ್ವದ ಮೋದಿ ಸರಕಾರ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ತನ್ನ ರಾಜಕೀಯ ತೆವಲಿಗೆ ಬಳಸಿಕೊಳ್ಳುತ್ತಿರುವುದು ನಾಚಿಗೆಗೆಡಿತನ ಪರಮಾವಧಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಸುನೀತಾ ಹುರಿಕಡ್ಲಿ, ಇಂಟೆಕ್ ಅಧ್ಯಕ್ಷ ಆಗ್ನೇಲ್ ಡಯಾಸ್, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಪಟ್ಟಣ ಪಂಚಾಯತ ಅಧ್ಯಕ್ಷ ರಾಜಶ್ರೀ ನಾಯ್ಕ, ಸದಸ್ಯರಾದ ಜೋಸ್ಪಿನ್ ಡಯಾಸ್, ಜೈನಾಬಿ ಶೇಖ, ಸುರೇಶ ಮೇಸ್ತ, ಬ್ಲಾಕ್ ಕಾಂಗ್ರೇಸ್‍ನ ವಿನಾಯಕ ಶೇಟ್, ದಾಮೋದರ ನಾಯ್ಕ, ಲಂಭೋದರ ನಾಯ್ಕ, ಮಾದೇವ ನಾಯ್ಕ, ನೆಲ್ಸನ್ ರೊಡ್ರಿಗಿಸ್, ಲೀನಾ ಫರ್ನಾಂಡೀಸ್, ಹರೀಶ ನಾಯ್ಕ, ಬಾಲಚಂದ್ರ ನಾಯ್ಕ, ತುಳಸಿ ಗೌಡ, ಉಮಾ ಮೇಸ್ತ, ಮುಸಾ ಅಣ್ಣಿಗೇರಿ, ಇಸ್ಮಾಯಲ್ ಕವಲಕ್ಕಿ, ಇನ್ನೂ ಮಂತಾದವರು ಉಪಸ್ಥಿತರಿದ್ದರು.

Honnavar block Congress Press Meet

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: Assembly election, Bhimanna Naik, Bhimanna v. The case, Chavara, Faodoka, former MLA Satish Sail, Haldipur, illegal money laundering, Jagadipa Tengerei, Kadle, Lok Sabha election, Navalogon, political induction, president of Uttarkhand District Congress, Sabarkoda village, The rest of the Karki

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...