• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಕ್ಷಗಾನ ನಾಡಿನ ಸಂಸ್ಕøತಿಯ ಪ್ರತೀಕ – ಎಮ್. ಎ. ಹೆಗಡೆ

March 20, 2019 by Gaju Gokarna Leave a Comment

watermarked hnr 20 ak.

ಹೊನ್ನಾವರ : ಯಕ್ಷಗಾನ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ಯಕ್ಷಗಾನದ ಭಾಷೆಯ ಸೊಗಡು, ಮುಖವರ್ಣಿಕೆ, ವೇಷಭೂಷಣ, ಕುಣಿತಗಳೆಲ್ಲವೂ ವೈಶಿಷ್ಟ್ಯಪೂರ್ಣವಾಗಿದ್ದು ಅದಕ್ಕೆ ಅದರದೇ ಆದ ಆಸ್ವಾದಿಸುವ ವರ್ಗವಿದೆ ಎಂದು ಕರ್ನಾಟಕ ಅಕಾಡೆಮಿ ಅಧ್ಯಕ್ಷರಾದ ಎಮ್.ಎ.ಹೆಗಡೆ ಅಭಿಪ್ರಾಯ ಪಟ್ಟರು.
ಅವರು ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನ(ರಿ) ಹೊನ್ನಾವರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಕಿ ಇದರ ಸಂಯುಕ್ತಾಶ್ರಯದಲ್ಲಿ ಮಂಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯಕ್ಷಗಾನ ಸಂಕೀರ್ಣೋತ್ಸವ, ಯಕ್ಷನೃತ್ಯ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಡಾ.ಸುರೇಶ ನಾಯ್ಕರವರ ನಾರಾಯಣ ಪ್ರತಿಷ್ಠಾನವು ಸಾಹಿತ್ಯ ಮತ್ತು ಸಾಂಸ್ಕøತಿಕ ಮುಖ್ಯವಾಹಿನಿಯಲ್ಲಿ ಯಕ್ಷಗಾನದ ಕುರಿತು ವಿಶೇಷ ಕಾಳಜಿ ವಹಿಸಿ ಕಾರ್ಯಕ್ರಮ ಸಂಘಟಿಸುವ ಮುಖೇನ ಒಂದು ಅರ್ಥಪೂರ್ಣ ಕಾರ್ಯಕ್ರಮ ಸಂಘಟಿಸಿದ್ದಾರೆ. ಇಂದು ಯಕ್ಷಗಾನದ ಪ್ರಸಂಗಗಳು ಎಲ್ಲೆಡೆ ಪ್ರಚಲಿತದಲ್ಲಿದ್ದರೂ ಅದರ ಕುರಿತು ಚರ್ಚೆ, ಸಂವಾದಗಳು ನಡೆಯುತ್ತಿಲ್ಲ. ಆದರೆ ನಾರಾಯಣ ಪ್ರತಿಷ್ಠಾನವು ಇಂತಹ ಕಾರ್ಯಕ್ರಮ ಆಯೋಜಿಸಿ ಯುವಜನತೆ ಯಕ್ಷಗಾನದ ಕುರಿತು ಆಸಕ್ತಿ ಹೊಂದುವಂತೆ ಮಾಡಿದ್ದಾರೆ ಎಂದು ನುಡಿದರು.

ಅತಿಥಿಗಳಾಗಿ ಆಗಮಿಸಿದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅರವಿಂದ ಕರ್ಕಿಕೋಡಿ ಮಾತನಾಡಿ ಯಕ್ಷಗಾನದ ಪ್ರಸಂಗಕರ್ತರೂ ಕೂಡ ಸಾಹಿತಿಗಳೇ ಆಗಿರುತ್ತಾರೆ. ಹಾಗಾಗಿಯೇ ನಾವು ನಮ್ಮ ಅವಧಿಯ ಸಾಹಿತ್ಯ ಸಮ್ಮೇಳನಗಳಲ್ಲಿ ಯಕ್ಷಗಾನಕ್ಕೆ ವಿಶೇಷ ಒತ್ತು ನೀಡಿ ಗೋಷ್ಠಿಗಳನ್ನು ಏರ್ಪಡಿಸಿದ್ದೇವೆ. ಯಕ್ಷಗಾನಕ್ಕೆ ಹೊನ್ನಾವರದ ಕಲಾವಿದರು ನೀಡಿದ ಕೊಡುಗೆ ಅಪಾರ. ಇಲ್ಲಿನ ಹಲವು ಕಲಾವಿದರು ತೆಂಕು ಮತ್ತು ಬಡಗು ತಿಟ್ಟಿನಲ್ಲೂ ತಮ್ಮ ಕಲಾ ಪ್ರೌಢಿಮೆ ಮೆರೆದಿರುವದು ನಮ್ಮ ತಾಲೂಕಿಗೆ ಹೆಮ್ಮೆ. ಮತ್ತು ಅಭಿಮಾನ ಪಡುವ ಸಂಗತಿಯಾಗಿದೆ ಎಂದು ಅಭಿಪ್ರಾಯ ಪಟ್ಟರು.
ಮತ್ತೋರ್ವ ಅತಿಥಿ ಪಿ.ಯು.ಕಾಲೇಜಿನ ಪ್ರಾಚಾರ್ಯರಾದ ವಿದ್ಯಾ ಟಿ. ನಾಯಕಮಾತನಾಡಿ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ಸಂಘಟಿಸುವು ಮೂಲಕ ನಾರಾಯಣ ಪ್ರತಿಷ್ಠಾನವು ಜನಮುಖಿಯಾಗುವ ಕೆಲಸ ಮಾಡುತ್ತಿದೆ ಎಂದರು.
ಡಾ.ಎನ್.ಆರ್.ನಾಯಕ ಮಾತನಾಡಿ ಯಕ್ಷಗಾನದ ವೇಷಭೂಷಣಗಳು ಜನಪದ ಕಲೆಯಂತಿದ್ದರೂ ಭಿನ್ನವಾಗಿ ನಿಲ್ಲುತ್ತದೆ ಎಂದರು.
ಡಾ.ಸುರೇಶ ನಾಯ್ಕ ಪ್ರಾಸ್ತಾವಿಕ ನುಡಿಯಲ್ಲಿ ತಂದೆಯ ಹೆಸರಿನಲ್ಲಿ ಸ್ಥಾಪಿಸಿದ ನಾರಾಯಣ ಪ್ರತಿಷ್ಠಾನವು ಕಳೆದ ಮೂರುವರ್ಷಗಳಿಂದ ಜಾನಪದ ಸಾಹಿತ್ಯ, ಜಾನಪದ ಕಲೆ, ಕವಿಗೋಷ್ಠಿ, ಪುಸ್ತಕ ಬಿಡುಗಡೆ, ನಾಟಿವೈದ್ಯರ ಸನ್ಮಾನ ಹೀಗೆ ಹಲವು ಕಾರ್ಯಕ್ರಮಗಳನ್ನು ಸಂಘಟಿಸುತ್ತಾ ಬಂದಿದೆ. ಈ ವರ್ಷ ಯಕ್ಷಗಾನ ಅಕಾಡೆಮಿ ಮತ್ತು ಮಂಕಿ ಸರ್ಕಾರಿ ಪದವಿ ಕಾಲೇಜುಗಳು ನಮ್ಮ ಜೊತೆ ಸಹಕರಿಸಿರುವುದು ನಮಗೂ ಸಂತಸ ನೀಡಿದೆ. ಜನಪರವಾದ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸಂಘಟಿಸಲು ನಮ್ಮ ಪ್ರತಿಷ್ಠಾನವು ಯೋಜನೆ ರೂಪಿಸುತ್ತದೆ ಎಂದು ಅಭಿಪ್ರಾಯ ಪಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ.ಗಣೇಶ ವಿ.ಜಿ.ಮಾತನಾಡಿ ಪದವಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಂಶೋಧನೆಯಲ್ಲಿ ತೊಡಗಲು ಇಂತಹ ವಿಚಾರ ಸಂಕಿರಣಗಳು ನೆರವಾಗುತ್ತದೆ. ಯಕ್ಷಗಾನ ನಮ್ಮ ನಾಡಿನ ಗಂಡುಕಲೆ. ಯಕ್ಷಗಾನದ ಮೇರು ನಟ ಚಿಟ್ಟಾಣಿ ರಾಮಚಂದ್ರ ಹೆಗಡೆ, ಶಂಭು ಹೆಗಡೆ, ಜಲವಳ್ಳಿ ವೆಂಕಟೇಶ ರಾವ್ ಮೊದಲಾದ ಕಲಾವಿದರು ಬಡಾಬಡಗು ತಿಟ್ಟನ್ನು ಉಚ್ಚ್ರಾಯಸ್ಥಿತಿಗೆ ಕೊಂಡೊಯ್ದಿದ್ದಾರೆ. ಇಂತಹ ಕಲೆಯ ಕುರಿತು ವಿಸ್ತಾರವಾದ ಚರ್ಚೆ, ಸಂವಾದಗಳು ನಮ್ಮ ಕಾಲೇಜಿನಲ್ಲಿ ನಡೆಯುತ್ತಿರುವುದು ನಮಗೂ ಬಹಳ ಸಂತೋಷ ನೀಡಿದೆ ಎಂದು ಅಭಿಪ್ರಾಯ ಪಟ್ಟರು.
ಸುರೇಶ ನಾಯ್ಕ ಹೊಳೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ ರಾಯಸ್ ವಂದಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: costumes, faces, Government First Class College Monkey, Honnavar, Its Association, M. A. Hegde, Narayana Sahitya, Sanskrit Foundation, Yakshagana Kannada language, Yakshagana language fashions, Yakshagana National Institute of Culture

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...